Advertisement
MIRROR FOCUS

ವಿಷ ರಹಿತ ಅಡಿಕೆ ದಾಸ್ತಾನು | ಪುತ್ತೂರಿನಲ್ಲಿ ಮಾಹಿತಿ ಕಾರ್ಯಕ್ರಮ | ಕೃಷಿ ಉತ್ಪನ್ನಗಳ ದಾಸ್ತಾನಿಗೆ ವಿಷ ರಹಿತ ವ್ಯವಸ್ಥೆ ಅಗತ್ಯವಿದೆ

Share
ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ಕೊಯ್ಲು ನಂತರ ವೈಜ್ಞಾನಿಕ ದಾಸ್ತಾನು ಕೂಡಾ ಅತೀ ಮುಖ್ಯವಾದ ವಿಷಯ. ಅನೇಕ ಸಮಯಗಳಿಂದ ವಿವಿಧ ಪ್ರಯೋಗವನ್ನು ಕೆಲವು ಕೃಷಿಕರು ಮಾಡುತ್ತಿದ್ದಾರೆ. ಇದೀಗ ವಿನೂತನ ತಂತ್ರಜ್ಞಾನ ಬ್ಯಾಗ್‌ ಬಗ್ಗೆ ಮಾಹಿತಿ ಕಾರ್ಯಕ್ರಮ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ಪುತ್ತೂರಿನ ಚುಂಚಶ್ರೀ ಸಭಾಭವನದಲ್ಲಿ ಶುಕ್ರವಾರ ನಡೆಯಿತು.ಮುಂದೆ ಓದಿ
ಸಭೆಯ ಅಧ್ಯಕ್ಷತೆಯನ್ನು  ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ವಹಿಸಿದ್ದರು. ಸಭೆಯಲ್ಲಿ ವಿಟ್ಲದ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ, ಕೃಷಿಕ ಹಾಗೂ ಸಿಟಿ ಆಸ್ಪತ್ರೆಯ ವೈದ್ಯ ಡಾ. ಸೂರ್ಯನಾರಾಯಣ ಹಾಗೂ ಗ್ರೈನ್‌ ಪ್ರೋ ಸಂಸ್ಥೆಯ ದಕ್ಷಿಣ ಭಾರತ ಮತ್ತು ಶ್ರೀಲಂಕಾದ ವಿಭಾಗದ ಮಾರ್ಕೆಂಟಿಗ್‌ ಮುಖ್ಯಸ್ಥ ಗೋಪಿನಾಥ್‌ ವಡಿವೆಲ್‌ ಮಾಹಿತಿ ನೀಡಿದರು. ಮುಂದೆ ಓದಿ
ವಿಟ್ಲದ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಮಾತನಾಡಿ, ಅಡಿಕೆ ಹಾಗೂ ಕೃಷಿಉತ್ಪನ್ನಗಳನ್ನು  ನೈಟ್ರೋಜನ್‌ ಗ್ಯಾಸ್‌ ಬಳಕೆ ಮಾಡಿ ಕೊಠಡಿಗಳಲ್ಲಿ ದಾಸ್ತಾನು ಮಾಡುವ ಬಗ್ಗೆ ಪಿಂಗಾರ ಸಂಸ್ಥೆಯು ನಡೆಸುತ್ತಿರುವ ವಿಧಾನಗಳು ಹಾಗೂ ಅಧ್ಯಯನಗಳ ಬಗ್ಗೆ ಮಾಹಿತಿ ನೀಡಿದರು.  ಕೃಷಿಕ ಹಾಗೂ ಸಿಟಿ ಆಸ್ಪತ್ರೆಯ ವೈದ್ಯ ಡಾ. ಸೂರ್ಯನಾರಾಯಣ ಮಾತನಾಡಿ, ಅಡಿಕೆಯನ್ನು ಕರ್ಪೂರ ಬಳಸಿ ಡ್ರಮ್‌ಗಳಲ್ಲಿ ಶೇಖರಣೆ ಮಾಡುವ ವಿಧಾನ ಹಾಗೂ ಅದರಲ್ಲಿ ಯಶಸ್ಸಿನ ಬಗ್ಗೆ ಮಾಹಿತಿ ನೀಡಿದರು. ಗ್ರೈನ್‌ ಪ್ರೋ ಸಂಸ್ಥೆಯ ದಕ್ಷಿಣ ಭಾರತ ಮತ್ತು ಶ್ರೀಲಂಕಾದ ವಿಭಾಗದ ಮಾರ್ಕೆಂಟಿಗ್‌ ಮುಖ್ಯಸ್ಥ ಗೋಪಿನಾಥ್‌ ವಡಿವೆಲ್‌ ಮಾತನಾಡಿ, ವಿಶೇಷ ವಿನ್ಯಾಸದ ಬ್ಯಾಗ್‌ಗಳು ಹಾಗೂ ಕೊಕೂನ್‌ ಗಳ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ವಿದೇಶಗಳಲ್ಲಿ ಇಂತಹ ಬ್ಯಾಗ್‌ ಬಳಕೆ ಮಾಡುತ್ತಿದ್ದಾರೆ. ಭಾರತದಲ್ಲಿ ಕೂಡಾ ಈಚೆಗೆ ಈ ಮಾದರಿಯ ದಾಸ್ತಾನು ಬಗ್ಗೆ ಕೃಷಿಕರು ಆಸಕ್ತರಾಗಿದ್ದಾರೆ ಎಂದರು.ಮುಂದೆ ಓದಿ
ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಮಾತನಾಡಿ, ಅಡಿಕೆ ಬೆಳೆಗಾರರಿಗೆ ದಾಸ್ತಾನು ಹಾಗೂ ಅಡಿಕೆ ಗುಣಮಟ್ಟ ಕಾಪಾಡುವುದು ಈಗ ಬಹುದೊಡ್ಡ ಸವಾಲಿನ ಕೆಲಸವಾಗಿದೆ. ಹೊಸ ಮಾದರಿಯ ಪ್ರಯತ್ನಗಳು ಅಡಿಕೆ ದಾಸ್ತಾನಿನ ಬಗ್ಗೆ ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು. ಮುಂದೆ ಓದಿ
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ  ಸ್ವಾಗತಿಸಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

2 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

4 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

13 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago