Advertisement
ಸುದ್ದಿಗಳು

ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಇದ್ದವು | ನಾವು ಅಧಿಕಾರಕ್ಕೆ ಬರುವುದು ಪಕ್ಕಾ – ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

Share

ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದಿದೆ. ರಾಜಕೀಯ ನಾಯಕರ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಕರುನಾಡ ಮತಪ್ರಭುಗಳು ತಮ್ಮ ಹಕ್ಕು ಚಲಾಯಿಸಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಹೊರ ಬಿದ್ದಿದ್ದು ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್​ಗೆ ಗದ್ದುಗೆ ಅಂತ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಕಮಲ ಅರಳೋದು ಪಕ್ಕಾ ಎಂದಿವೆ.  ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಗ್ಗಾವಿ ಜನತೆ ತೋರಿದ ಪ್ರೀತಿಗೆ ನಾನು ಚಿರರುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು. ನನ್ನ ವಿರುದ್ಧ ಷಡ್ಯಂತರ, ಅಪಪ್ರಚಾರ ಮಾಡಿದರೂ ನಿನ್ನೆಗೆ ಮುಗಿದಿದೆ. ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ. ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107 ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದೆ ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಅತಂತ್ರ ಎಂಬ ಪ್ರಶ್ನೆ ಉತ್ತರ ನೀಡಲ್ಲ. ನಾನು 150 ಅಂತ ಎಲ್ಲೂ ಹೇಳಿಲ್ಲ ಆದರೆ ಬಹುಮತ ಅಂತ ಹೇಳಿದ್ದೆ ಈಗಲೂ ಅದೇ ಹೇಳಿಕೆ ಬದ್ಧನಾಗಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago