ಮಹಾರಾಷ್ಟ್ರದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ | ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು | ವಿಜಯಪುರದಲ್ಲಿ ವರುಣಾರ್ಭಟಕ್ಕೆ ಕುಸಿದ ಬೃಹತ್ ಬಾವಿ ಗೋಡೆ |

June 13, 2024
2:44 PM

ಮುಂಗಾರು(Mansoon rain) ಆರ್ಭಟ ಹೆಚ್ಚಾಗುತ್ತಿದೆ. ಇದರಿಂದ ರೈತರ ಜಮೀನು(Farmers land), ಬೆಳೆ(Crop) ಮೇಲೆ ಪರಿಣಾಮ ಬೀರುತ್ತಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ(Heavy rain) ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಮಾಣಿಕ್ಯ ಡ್ಯಾಂ(Manikya Dam) ನಿಂದ ಯಾರಿಗೂ ತಿಳಿಸದ ಜಿಲ್ಲೆಯ ಮಾಂಜ್ರಾ ನದಿಗೆ (Manjra River) ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಬೀದರ್ (Bidar) ಜಿಲ್ಲೆಯ ಹೂಲಸೂರಿ ಪಟ್ಟಣದ ಹೊರವಲಯದಲ್ಲಿರುವ ಕೋಂಗಳಿ ಬ್ರಿಜ್ ಕಂ ಬ್ಯಾರೇಜ್‌ನ ಬಾಗಿಲು ತೆರೆಯದ ಕಾರಣ ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ‌‌‌.

ಹುಲಸೂರು ತಾಲೂಕಿನ ಮಾಂಜ್ರಾ ನದಿ ದಡದಲ್ಲಿರುವ ಕೋಂಗಳಿ, ಜಾಮಖಂಡಿ, ವಾಂಜರಖೇಡ, ಹಲಸೂರು ಗ್ರಾಮದ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ವಿದ್ಯುತ್ ಬಿಲ್ ಕಟ್ಟಲಾಗದ ಕಾರಣ ಕೋಂಗಳಿ ಬ್ರಿಜ್‌ಗೆ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ. ವಿದ್ಯುತ್ ಇಲ್ಲದೆಯೇ ಬ್ಯಾರೇಜ್ ಬಾಗಿಲು ತೆರೆಯಲು ಲೇಟಾದ ಕಾರಣ ಜಮೀನುಗಳಿಗೆ ನೀರು ನುಗ್ಗಿ‌ದೆ.‌ ಮಾಂಜ್ರಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೋಂಗಳಿ ಏತ ನೀರಾವರಿ ಯೋಜನೆಯ ಬ್ರೀಜ್ ಕಂ ಬ್ಯಾರೇಜ್ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿದೆ.

ಇನ್ನು ಇತ್ತ ವಿಜಯಪುರ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿದ ಹಿನ್ನೆಲೆ, ದೇವರಹಿಪ್ಪರಗಿಯಲ್ಲಿ ರೈತನ ಜೀವನಕ್ಕೆ ಆಸರೆಯಾಗಿದ್ದ ಬೃಹತ್‌ ಬಾವಿಯೊಂದು ಜಲಸಮಾಧಿಯಾದ ಘಟನೆ ನಡೆದಿದೆ. ದೇವರಹಿಪ್ಪರಗಿ ಗ್ರಾಮದ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಎನ್ನುವವರ ಬಾವಿ ಗೋಡೆ ಕುಸಿದಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸರಿಸುಮಾರು 60 ಲಕ್ಷ ರೂಪಾಯಿ ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕೊರೆಸಿದ್ದ ಬಾವಿ ಇದಾಗಿತ್ತು. ಬಾವಿ ಸುತ್ತಲೂ ಬೃಹತ್‌ ಕಲ್ಲಿನ ಗೋಡೆ ನಿರ್ಮಿಸಿದ್ದರು. ಅಲ್ಲದೇ ಈ ಬಾವಿ ನೀರಿನ ಆಸರೆಯಿಂದ ತಮ್ಮ 14 ಎಕರೆ ಜಮೀನಿಗೆ ನೀರಾವರಿ ವ್ಯವಸ್ಥೆ ಮಾಡಿಸಿದ್ದರು. ಇದೀಗ ಜಮೀನಿನಲ್ಲಿ ಸುರಿದ ಭಾರಿ ಮಳೆ ಪರಿಣಾಮ, ಆ ಬಾವಿಯ ಗೋಡೆ ಸಂಪೂರ್ಣ ಕುಸಿದು ಬಿದ್ದು, ಜಲಸಮಾಧಿ ಆದಂತಾಗಿದೆ. ಇದರಿಂದಾಗಿ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಚಿಂತೆಗೀಡಾಗಿದ್ದಾರೆ.  110 ಅಡಿ ಆಳದ ಬಾವಿ ಸುತ್ತಲೂ 45 ಅಡಿ ಕಲ್ಲಿನ ಗೋಡೆಯನ್ನು ಕಟ್ಟಿಸಿದ್ದರು. ಬಾವಿಯೊಳಗಿದ್ದ 7.5 ಹೆಚ್.ಪಿ ಸಾಮರ್ಥ್ಯದ 2 ಮೋಟಾರುಗಳು ಸಹ ನೀರು ಪಾಲಾಗಿವೆ. ಬಾವಿ ಕುಸಿದಿರೋ ಹಿನ್ನೆಲೆ ಮುಂದೆ ಕೃಷಿಗೆ ನೀರು ಪೂರೈಸುವುದು ಹೇಗೆ ಎನ್ನುವ ಚಿಂತೆ ಕಾಡುತ್ತಿದೆ. ಸರ್ಕಾರ ಸೂಕ್ತ ಪರಿಹಾರ ಕೊಡಲಿ ಎಂದು ಒತ್ತಾಯಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror