MIRROR FOCUS

ಮಹಾರಾಷ್ಟ್ರದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ | ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು | ವಿಜಯಪುರದಲ್ಲಿ ವರುಣಾರ್ಭಟಕ್ಕೆ ಕುಸಿದ ಬೃಹತ್ ಬಾವಿ ಗೋಡೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು(Mansoon rain) ಆರ್ಭಟ ಹೆಚ್ಚಾಗುತ್ತಿದೆ. ಇದರಿಂದ ರೈತರ ಜಮೀನು(Farmers land), ಬೆಳೆ(Crop) ಮೇಲೆ ಪರಿಣಾಮ ಬೀರುತ್ತಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ(Heavy rain) ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಮಾಣಿಕ್ಯ ಡ್ಯಾಂ(Manikya Dam) ನಿಂದ ಯಾರಿಗೂ ತಿಳಿಸದ ಜಿಲ್ಲೆಯ ಮಾಂಜ್ರಾ ನದಿಗೆ (Manjra River) ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಬೀದರ್ (Bidar) ಜಿಲ್ಲೆಯ ಹೂಲಸೂರಿ ಪಟ್ಟಣದ ಹೊರವಲಯದಲ್ಲಿರುವ ಕೋಂಗಳಿ ಬ್ರಿಜ್ ಕಂ ಬ್ಯಾರೇಜ್‌ನ ಬಾಗಿಲು ತೆರೆಯದ ಕಾರಣ ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ‌‌‌.

Advertisement
ಹುಲಸೂರು ತಾಲೂಕಿನ ಮಾಂಜ್ರಾ ನದಿ ದಡದಲ್ಲಿರುವ ಕೋಂಗಳಿ, ಜಾಮಖಂಡಿ, ವಾಂಜರಖೇಡ, ಹಲಸೂರು ಗ್ರಾಮದ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ವಿದ್ಯುತ್ ಬಿಲ್ ಕಟ್ಟಲಾಗದ ಕಾರಣ ಕೋಂಗಳಿ ಬ್ರಿಜ್‌ಗೆ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ. ವಿದ್ಯುತ್ ಇಲ್ಲದೆಯೇ ಬ್ಯಾರೇಜ್ ಬಾಗಿಲು ತೆರೆಯಲು ಲೇಟಾದ ಕಾರಣ ಜಮೀನುಗಳಿಗೆ ನೀರು ನುಗ್ಗಿ‌ದೆ.‌ ಮಾಂಜ್ರಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೋಂಗಳಿ ಏತ ನೀರಾವರಿ ಯೋಜನೆಯ ಬ್ರೀಜ್ ಕಂ ಬ್ಯಾರೇಜ್ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿದೆ.

ಇನ್ನು ಇತ್ತ ವಿಜಯಪುರ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿದ ಹಿನ್ನೆಲೆ, ದೇವರಹಿಪ್ಪರಗಿಯಲ್ಲಿ ರೈತನ ಜೀವನಕ್ಕೆ ಆಸರೆಯಾಗಿದ್ದ ಬೃಹತ್‌ ಬಾವಿಯೊಂದು ಜಲಸಮಾಧಿಯಾದ ಘಟನೆ ನಡೆದಿದೆ. ದೇವರಹಿಪ್ಪರಗಿ ಗ್ರಾಮದ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಎನ್ನುವವರ ಬಾವಿ ಗೋಡೆ ಕುಸಿದಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸರಿಸುಮಾರು 60 ಲಕ್ಷ ರೂಪಾಯಿ ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕೊರೆಸಿದ್ದ ಬಾವಿ ಇದಾಗಿತ್ತು. ಬಾವಿ ಸುತ್ತಲೂ ಬೃಹತ್‌ ಕಲ್ಲಿನ ಗೋಡೆ ನಿರ್ಮಿಸಿದ್ದರು. ಅಲ್ಲದೇ ಈ ಬಾವಿ ನೀರಿನ ಆಸರೆಯಿಂದ ತಮ್ಮ 14 ಎಕರೆ ಜಮೀನಿಗೆ ನೀರಾವರಿ ವ್ಯವಸ್ಥೆ ಮಾಡಿಸಿದ್ದರು. ಇದೀಗ ಜಮೀನಿನಲ್ಲಿ ಸುರಿದ ಭಾರಿ ಮಳೆ ಪರಿಣಾಮ, ಆ ಬಾವಿಯ ಗೋಡೆ ಸಂಪೂರ್ಣ ಕುಸಿದು ಬಿದ್ದು, ಜಲಸಮಾಧಿ ಆದಂತಾಗಿದೆ. ಇದರಿಂದಾಗಿ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಚಿಂತೆಗೀಡಾಗಿದ್ದಾರೆ.  110 ಅಡಿ ಆಳದ ಬಾವಿ ಸುತ್ತಲೂ 45 ಅಡಿ ಕಲ್ಲಿನ ಗೋಡೆಯನ್ನು ಕಟ್ಟಿಸಿದ್ದರು. ಬಾವಿಯೊಳಗಿದ್ದ 7.5 ಹೆಚ್.ಪಿ ಸಾಮರ್ಥ್ಯದ 2 ಮೋಟಾರುಗಳು ಸಹ ನೀರು ಪಾಲಾಗಿವೆ. ಬಾವಿ ಕುಸಿದಿರೋ ಹಿನ್ನೆಲೆ ಮುಂದೆ ಕೃಷಿಗೆ ನೀರು ಪೂರೈಸುವುದು ಹೇಗೆ ಎನ್ನುವ ಚಿಂತೆ ಕಾಡುತ್ತಿದೆ. ಸರ್ಕಾರ ಸೂಕ್ತ ಪರಿಹಾರ ಕೊಡಲಿ ಎಂದು ಒತ್ತಾಯಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

3 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

3 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

18 hours ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

18 hours ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

1 day ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

1 day ago