Advertisement
MIRROR FOCUS

ಮಹಾರಾಷ್ಟ್ರದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ | ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು | ವಿಜಯಪುರದಲ್ಲಿ ವರುಣಾರ್ಭಟಕ್ಕೆ ಕುಸಿದ ಬೃಹತ್ ಬಾವಿ ಗೋಡೆ |

Share

ಮುಂಗಾರು(Mansoon rain) ಆರ್ಭಟ ಹೆಚ್ಚಾಗುತ್ತಿದೆ. ಇದರಿಂದ ರೈತರ ಜಮೀನು(Farmers land), ಬೆಳೆ(Crop) ಮೇಲೆ ಪರಿಣಾಮ ಬೀರುತ್ತಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ(Heavy rain) ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಮಾಣಿಕ್ಯ ಡ್ಯಾಂ(Manikya Dam) ನಿಂದ ಯಾರಿಗೂ ತಿಳಿಸದ ಜಿಲ್ಲೆಯ ಮಾಂಜ್ರಾ ನದಿಗೆ (Manjra River) ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಬೀದರ್ (Bidar) ಜಿಲ್ಲೆಯ ಹೂಲಸೂರಿ ಪಟ್ಟಣದ ಹೊರವಲಯದಲ್ಲಿರುವ ಕೋಂಗಳಿ ಬ್ರಿಜ್ ಕಂ ಬ್ಯಾರೇಜ್‌ನ ಬಾಗಿಲು ತೆರೆಯದ ಕಾರಣ ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ‌‌‌.

ಹುಲಸೂರು ತಾಲೂಕಿನ ಮಾಂಜ್ರಾ ನದಿ ದಡದಲ್ಲಿರುವ ಕೋಂಗಳಿ, ಜಾಮಖಂಡಿ, ವಾಂಜರಖೇಡ, ಹಲಸೂರು ಗ್ರಾಮದ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ವಿದ್ಯುತ್ ಬಿಲ್ ಕಟ್ಟಲಾಗದ ಕಾರಣ ಕೋಂಗಳಿ ಬ್ರಿಜ್‌ಗೆ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ. ವಿದ್ಯುತ್ ಇಲ್ಲದೆಯೇ ಬ್ಯಾರೇಜ್ ಬಾಗಿಲು ತೆರೆಯಲು ಲೇಟಾದ ಕಾರಣ ಜಮೀನುಗಳಿಗೆ ನೀರು ನುಗ್ಗಿ‌ದೆ.‌ ಮಾಂಜ್ರಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೋಂಗಳಿ ಏತ ನೀರಾವರಿ ಯೋಜನೆಯ ಬ್ರೀಜ್ ಕಂ ಬ್ಯಾರೇಜ್ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿದೆ.

ಇನ್ನು ಇತ್ತ ವಿಜಯಪುರ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿದ ಹಿನ್ನೆಲೆ, ದೇವರಹಿಪ್ಪರಗಿಯಲ್ಲಿ ರೈತನ ಜೀವನಕ್ಕೆ ಆಸರೆಯಾಗಿದ್ದ ಬೃಹತ್‌ ಬಾವಿಯೊಂದು ಜಲಸಮಾಧಿಯಾದ ಘಟನೆ ನಡೆದಿದೆ. ದೇವರಹಿಪ್ಪರಗಿ ಗ್ರಾಮದ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಎನ್ನುವವರ ಬಾವಿ ಗೋಡೆ ಕುಸಿದಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸರಿಸುಮಾರು 60 ಲಕ್ಷ ರೂಪಾಯಿ ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕೊರೆಸಿದ್ದ ಬಾವಿ ಇದಾಗಿತ್ತು. ಬಾವಿ ಸುತ್ತಲೂ ಬೃಹತ್‌ ಕಲ್ಲಿನ ಗೋಡೆ ನಿರ್ಮಿಸಿದ್ದರು. ಅಲ್ಲದೇ ಈ ಬಾವಿ ನೀರಿನ ಆಸರೆಯಿಂದ ತಮ್ಮ 14 ಎಕರೆ ಜಮೀನಿಗೆ ನೀರಾವರಿ ವ್ಯವಸ್ಥೆ ಮಾಡಿಸಿದ್ದರು. ಇದೀಗ ಜಮೀನಿನಲ್ಲಿ ಸುರಿದ ಭಾರಿ ಮಳೆ ಪರಿಣಾಮ, ಆ ಬಾವಿಯ ಗೋಡೆ ಸಂಪೂರ್ಣ ಕುಸಿದು ಬಿದ್ದು, ಜಲಸಮಾಧಿ ಆದಂತಾಗಿದೆ. ಇದರಿಂದಾಗಿ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಚಿಂತೆಗೀಡಾಗಿದ್ದಾರೆ.  110 ಅಡಿ ಆಳದ ಬಾವಿ ಸುತ್ತಲೂ 45 ಅಡಿ ಕಲ್ಲಿನ ಗೋಡೆಯನ್ನು ಕಟ್ಟಿಸಿದ್ದರು. ಬಾವಿಯೊಳಗಿದ್ದ 7.5 ಹೆಚ್.ಪಿ ಸಾಮರ್ಥ್ಯದ 2 ಮೋಟಾರುಗಳು ಸಹ ನೀರು ಪಾಲಾಗಿವೆ. ಬಾವಿ ಕುಸಿದಿರೋ ಹಿನ್ನೆಲೆ ಮುಂದೆ ಕೃಷಿಗೆ ನೀರು ಪೂರೈಸುವುದು ಹೇಗೆ ಎನ್ನುವ ಚಿಂತೆ ಕಾಡುತ್ತಿದೆ. ಸರ್ಕಾರ ಸೂಕ್ತ ಪರಿಹಾರ ಕೊಡಲಿ ಎಂದು ಒತ್ತಾಯಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

8 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

9 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

21 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

22 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

22 hours ago