Advertisement
MIRROR FOCUS

ಮಹಾರಾಷ್ಟ್ರದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ | ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು | ವಿಜಯಪುರದಲ್ಲಿ ವರುಣಾರ್ಭಟಕ್ಕೆ ಕುಸಿದ ಬೃಹತ್ ಬಾವಿ ಗೋಡೆ |

Share

ಮುಂಗಾರು(Mansoon rain) ಆರ್ಭಟ ಹೆಚ್ಚಾಗುತ್ತಿದೆ. ಇದರಿಂದ ರೈತರ ಜಮೀನು(Farmers land), ಬೆಳೆ(Crop) ಮೇಲೆ ಪರಿಣಾಮ ಬೀರುತ್ತಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ(Heavy rain) ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಮಾಣಿಕ್ಯ ಡ್ಯಾಂ(Manikya Dam) ನಿಂದ ಯಾರಿಗೂ ತಿಳಿಸದ ಜಿಲ್ಲೆಯ ಮಾಂಜ್ರಾ ನದಿಗೆ (Manjra River) ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಬೀದರ್ (Bidar) ಜಿಲ್ಲೆಯ ಹೂಲಸೂರಿ ಪಟ್ಟಣದ ಹೊರವಲಯದಲ್ಲಿರುವ ಕೋಂಗಳಿ ಬ್ರಿಜ್ ಕಂ ಬ್ಯಾರೇಜ್‌ನ ಬಾಗಿಲು ತೆರೆಯದ ಕಾರಣ ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ‌‌‌.

ಹುಲಸೂರು ತಾಲೂಕಿನ ಮಾಂಜ್ರಾ ನದಿ ದಡದಲ್ಲಿರುವ ಕೋಂಗಳಿ, ಜಾಮಖಂಡಿ, ವಾಂಜರಖೇಡ, ಹಲಸೂರು ಗ್ರಾಮದ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ವಿದ್ಯುತ್ ಬಿಲ್ ಕಟ್ಟಲಾಗದ ಕಾರಣ ಕೋಂಗಳಿ ಬ್ರಿಜ್‌ಗೆ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ. ವಿದ್ಯುತ್ ಇಲ್ಲದೆಯೇ ಬ್ಯಾರೇಜ್ ಬಾಗಿಲು ತೆರೆಯಲು ಲೇಟಾದ ಕಾರಣ ಜಮೀನುಗಳಿಗೆ ನೀರು ನುಗ್ಗಿ‌ದೆ.‌ ಮಾಂಜ್ರಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೋಂಗಳಿ ಏತ ನೀರಾವರಿ ಯೋಜನೆಯ ಬ್ರೀಜ್ ಕಂ ಬ್ಯಾರೇಜ್ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿದೆ.

ಇನ್ನು ಇತ್ತ ವಿಜಯಪುರ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿದ ಹಿನ್ನೆಲೆ, ದೇವರಹಿಪ್ಪರಗಿಯಲ್ಲಿ ರೈತನ ಜೀವನಕ್ಕೆ ಆಸರೆಯಾಗಿದ್ದ ಬೃಹತ್‌ ಬಾವಿಯೊಂದು ಜಲಸಮಾಧಿಯಾದ ಘಟನೆ ನಡೆದಿದೆ. ದೇವರಹಿಪ್ಪರಗಿ ಗ್ರಾಮದ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಎನ್ನುವವರ ಬಾವಿ ಗೋಡೆ ಕುಸಿದಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸರಿಸುಮಾರು 60 ಲಕ್ಷ ರೂಪಾಯಿ ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕೊರೆಸಿದ್ದ ಬಾವಿ ಇದಾಗಿತ್ತು. ಬಾವಿ ಸುತ್ತಲೂ ಬೃಹತ್‌ ಕಲ್ಲಿನ ಗೋಡೆ ನಿರ್ಮಿಸಿದ್ದರು. ಅಲ್ಲದೇ ಈ ಬಾವಿ ನೀರಿನ ಆಸರೆಯಿಂದ ತಮ್ಮ 14 ಎಕರೆ ಜಮೀನಿಗೆ ನೀರಾವರಿ ವ್ಯವಸ್ಥೆ ಮಾಡಿಸಿದ್ದರು. ಇದೀಗ ಜಮೀನಿನಲ್ಲಿ ಸುರಿದ ಭಾರಿ ಮಳೆ ಪರಿಣಾಮ, ಆ ಬಾವಿಯ ಗೋಡೆ ಸಂಪೂರ್ಣ ಕುಸಿದು ಬಿದ್ದು, ಜಲಸಮಾಧಿ ಆದಂತಾಗಿದೆ. ಇದರಿಂದಾಗಿ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಚಿಂತೆಗೀಡಾಗಿದ್ದಾರೆ.  110 ಅಡಿ ಆಳದ ಬಾವಿ ಸುತ್ತಲೂ 45 ಅಡಿ ಕಲ್ಲಿನ ಗೋಡೆಯನ್ನು ಕಟ್ಟಿಸಿದ್ದರು. ಬಾವಿಯೊಳಗಿದ್ದ 7.5 ಹೆಚ್.ಪಿ ಸಾಮರ್ಥ್ಯದ 2 ಮೋಟಾರುಗಳು ಸಹ ನೀರು ಪಾಲಾಗಿವೆ. ಬಾವಿ ಕುಸಿದಿರೋ ಹಿನ್ನೆಲೆ ಮುಂದೆ ಕೃಷಿಗೆ ನೀರು ಪೂರೈಸುವುದು ಹೇಗೆ ಎನ್ನುವ ಚಿಂತೆ ಕಾಡುತ್ತಿದೆ. ಸರ್ಕಾರ ಸೂಕ್ತ ಪರಿಹಾರ ಕೊಡಲಿ ಎಂದು ಒತ್ತಾಯಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?

ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…

11 hours ago

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

20 hours ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

20 hours ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

21 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

21 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

21 hours ago