Advertisement
MIRROR FOCUS

ಮಹಾರಾಷ್ಟ್ರದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ | ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು | ವಿಜಯಪುರದಲ್ಲಿ ವರುಣಾರ್ಭಟಕ್ಕೆ ಕುಸಿದ ಬೃಹತ್ ಬಾವಿ ಗೋಡೆ |

Share

ಮುಂಗಾರು(Mansoon rain) ಆರ್ಭಟ ಹೆಚ್ಚಾಗುತ್ತಿದೆ. ಇದರಿಂದ ರೈತರ ಜಮೀನು(Farmers land), ಬೆಳೆ(Crop) ಮೇಲೆ ಪರಿಣಾಮ ಬೀರುತ್ತಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ(Heavy rain) ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಮಾಣಿಕ್ಯ ಡ್ಯಾಂ(Manikya Dam) ನಿಂದ ಯಾರಿಗೂ ತಿಳಿಸದ ಜಿಲ್ಲೆಯ ಮಾಂಜ್ರಾ ನದಿಗೆ (Manjra River) ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಬೀದರ್ (Bidar) ಜಿಲ್ಲೆಯ ಹೂಲಸೂರಿ ಪಟ್ಟಣದ ಹೊರವಲಯದಲ್ಲಿರುವ ಕೋಂಗಳಿ ಬ್ರಿಜ್ ಕಂ ಬ್ಯಾರೇಜ್‌ನ ಬಾಗಿಲು ತೆರೆಯದ ಕಾರಣ ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ‌‌‌.

ಹುಲಸೂರು ತಾಲೂಕಿನ ಮಾಂಜ್ರಾ ನದಿ ದಡದಲ್ಲಿರುವ ಕೋಂಗಳಿ, ಜಾಮಖಂಡಿ, ವಾಂಜರಖೇಡ, ಹಲಸೂರು ಗ್ರಾಮದ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ವಿದ್ಯುತ್ ಬಿಲ್ ಕಟ್ಟಲಾಗದ ಕಾರಣ ಕೋಂಗಳಿ ಬ್ರಿಜ್‌ಗೆ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ. ವಿದ್ಯುತ್ ಇಲ್ಲದೆಯೇ ಬ್ಯಾರೇಜ್ ಬಾಗಿಲು ತೆರೆಯಲು ಲೇಟಾದ ಕಾರಣ ಜಮೀನುಗಳಿಗೆ ನೀರು ನುಗ್ಗಿ‌ದೆ.‌ ಮಾಂಜ್ರಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೋಂಗಳಿ ಏತ ನೀರಾವರಿ ಯೋಜನೆಯ ಬ್ರೀಜ್ ಕಂ ಬ್ಯಾರೇಜ್ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿದೆ.

ಇನ್ನು ಇತ್ತ ವಿಜಯಪುರ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿದ ಹಿನ್ನೆಲೆ, ದೇವರಹಿಪ್ಪರಗಿಯಲ್ಲಿ ರೈತನ ಜೀವನಕ್ಕೆ ಆಸರೆಯಾಗಿದ್ದ ಬೃಹತ್‌ ಬಾವಿಯೊಂದು ಜಲಸಮಾಧಿಯಾದ ಘಟನೆ ನಡೆದಿದೆ. ದೇವರಹಿಪ್ಪರಗಿ ಗ್ರಾಮದ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಎನ್ನುವವರ ಬಾವಿ ಗೋಡೆ ಕುಸಿದಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸರಿಸುಮಾರು 60 ಲಕ್ಷ ರೂಪಾಯಿ ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕೊರೆಸಿದ್ದ ಬಾವಿ ಇದಾಗಿತ್ತು. ಬಾವಿ ಸುತ್ತಲೂ ಬೃಹತ್‌ ಕಲ್ಲಿನ ಗೋಡೆ ನಿರ್ಮಿಸಿದ್ದರು. ಅಲ್ಲದೇ ಈ ಬಾವಿ ನೀರಿನ ಆಸರೆಯಿಂದ ತಮ್ಮ 14 ಎಕರೆ ಜಮೀನಿಗೆ ನೀರಾವರಿ ವ್ಯವಸ್ಥೆ ಮಾಡಿಸಿದ್ದರು. ಇದೀಗ ಜಮೀನಿನಲ್ಲಿ ಸುರಿದ ಭಾರಿ ಮಳೆ ಪರಿಣಾಮ, ಆ ಬಾವಿಯ ಗೋಡೆ ಸಂಪೂರ್ಣ ಕುಸಿದು ಬಿದ್ದು, ಜಲಸಮಾಧಿ ಆದಂತಾಗಿದೆ. ಇದರಿಂದಾಗಿ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಚಿಂತೆಗೀಡಾಗಿದ್ದಾರೆ.  110 ಅಡಿ ಆಳದ ಬಾವಿ ಸುತ್ತಲೂ 45 ಅಡಿ ಕಲ್ಲಿನ ಗೋಡೆಯನ್ನು ಕಟ್ಟಿಸಿದ್ದರು. ಬಾವಿಯೊಳಗಿದ್ದ 7.5 ಹೆಚ್.ಪಿ ಸಾಮರ್ಥ್ಯದ 2 ಮೋಟಾರುಗಳು ಸಹ ನೀರು ಪಾಲಾಗಿವೆ. ಬಾವಿ ಕುಸಿದಿರೋ ಹಿನ್ನೆಲೆ ಮುಂದೆ ಕೃಷಿಗೆ ನೀರು ಪೂರೈಸುವುದು ಹೇಗೆ ಎನ್ನುವ ಚಿಂತೆ ಕಾಡುತ್ತಿದೆ. ಸರ್ಕಾರ ಸೂಕ್ತ ಪರಿಹಾರ ಕೊಡಲಿ ಎಂದು ಒತ್ತಾಯಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

3 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

8 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

15 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

15 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

23 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

1 day ago