ಮುಂಗಾರು(Mansoon rain) ಆರ್ಭಟ ಹೆಚ್ಚಾಗುತ್ತಿದೆ. ಇದರಿಂದ ರೈತರ ಜಮೀನು(Farmers land), ಬೆಳೆ(Crop) ಮೇಲೆ ಪರಿಣಾಮ ಬೀರುತ್ತಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ(Heavy rain) ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಮಾಣಿಕ್ಯ ಡ್ಯಾಂ(Manikya Dam) ನಿಂದ ಯಾರಿಗೂ ತಿಳಿಸದ ಜಿಲ್ಲೆಯ ಮಾಂಜ್ರಾ ನದಿಗೆ (Manjra River) ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಬೀದರ್ (Bidar) ಜಿಲ್ಲೆಯ ಹೂಲಸೂರಿ ಪಟ್ಟಣದ ಹೊರವಲಯದಲ್ಲಿರುವ ಕೋಂಗಳಿ ಬ್ರಿಜ್ ಕಂ ಬ್ಯಾರೇಜ್ನ ಬಾಗಿಲು ತೆರೆಯದ ಕಾರಣ ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ.
ಇನ್ನು ಇತ್ತ ವಿಜಯಪುರ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿದ ಹಿನ್ನೆಲೆ, ದೇವರಹಿಪ್ಪರಗಿಯಲ್ಲಿ ರೈತನ ಜೀವನಕ್ಕೆ ಆಸರೆಯಾಗಿದ್ದ ಬೃಹತ್ ಬಾವಿಯೊಂದು ಜಲಸಮಾಧಿಯಾದ ಘಟನೆ ನಡೆದಿದೆ. ದೇವರಹಿಪ್ಪರಗಿ ಗ್ರಾಮದ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಎನ್ನುವವರ ಬಾವಿ ಗೋಡೆ ಕುಸಿದಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ.
ಸರಿಸುಮಾರು 60 ಲಕ್ಷ ರೂಪಾಯಿ ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕೊರೆಸಿದ್ದ ಬಾವಿ ಇದಾಗಿತ್ತು. ಬಾವಿ ಸುತ್ತಲೂ ಬೃಹತ್ ಕಲ್ಲಿನ ಗೋಡೆ ನಿರ್ಮಿಸಿದ್ದರು. ಅಲ್ಲದೇ ಈ ಬಾವಿ ನೀರಿನ ಆಸರೆಯಿಂದ ತಮ್ಮ 14 ಎಕರೆ ಜಮೀನಿಗೆ ನೀರಾವರಿ ವ್ಯವಸ್ಥೆ ಮಾಡಿಸಿದ್ದರು. ಇದೀಗ ಜಮೀನಿನಲ್ಲಿ ಸುರಿದ ಭಾರಿ ಮಳೆ ಪರಿಣಾಮ, ಆ ಬಾವಿಯ ಗೋಡೆ ಸಂಪೂರ್ಣ ಕುಸಿದು ಬಿದ್ದು, ಜಲಸಮಾಧಿ ಆದಂತಾಗಿದೆ. ಇದರಿಂದಾಗಿ ರೈತ ಸಿದ್ದಪ್ಪ ಭೋಜಪ್ಪ ಸರಬಡಗಿ ಚಿಂತೆಗೀಡಾಗಿದ್ದಾರೆ. 110 ಅಡಿ ಆಳದ ಬಾವಿ ಸುತ್ತಲೂ 45 ಅಡಿ ಕಲ್ಲಿನ ಗೋಡೆಯನ್ನು ಕಟ್ಟಿಸಿದ್ದರು. ಬಾವಿಯೊಳಗಿದ್ದ 7.5 ಹೆಚ್.ಪಿ ಸಾಮರ್ಥ್ಯದ 2 ಮೋಟಾರುಗಳು ಸಹ ನೀರು ಪಾಲಾಗಿವೆ. ಬಾವಿ ಕುಸಿದಿರೋ ಹಿನ್ನೆಲೆ ಮುಂದೆ ಕೃಷಿಗೆ ನೀರು ಪೂರೈಸುವುದು ಹೇಗೆ ಎನ್ನುವ ಚಿಂತೆ ಕಾಡುತ್ತಿದೆ. ಸರ್ಕಾರ ಸೂಕ್ತ ಪರಿಹಾರ ಕೊಡಲಿ ಎಂದು ಒತ್ತಾಯಿಸಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…