Advertisement
MIRROR FOCUS

ಟ್ರೋಫಿ ಗೆದ್ದ RCB ಮಹಿಳಾ ತಂಡಕ್ಕೆ ಕೋಟಿ ಕೋಟಿ ಬಹುಮಾನ | ಆರ್‌ಸಿಬಿ ಮಹಿಳಾ ಮಣಿಗಳು ದೋಚಿದ ಬಹುಮಾನದ ಮೊತ್ತ ಎಷ್ಟು?

Share

ಈ ಸಲ ಕಪ್‌(Cup) ನಮ್ಮದೇ.. ಈ ಸಲ ಕಪ್‌ ನಮ್ಮದೆ ಅಂತ ಬೆಂಗಳೂರು ರಾಯಲ್‌ ಚಾಲೆಂಜರ್ಸ್‌(RCB) ಅಭಿಮಾನಿಗಳು(Fans) ಸತತ 16 ವರುಷಗಳಿಂದ ಕಾಯುವಿಕೆಯ ಕನಸು ಈ ಬಾರಿ ನನಸು ಮಾಡಿದ್ದಾರೆ ಮಹಿಳಾ ಮಣಿಯರು. ಮಹಿಳಾ ಪ್ರೀಮಿಯರ್‌ ಲೀಗ್‌ನ (Women’s Premier League) ಫೈನಲ್‌ ಪಂದ್ಯದಲ್ಲಿ(Final match) ಡೆಲ್ಲಿ ಕ್ಯಾಪಿಟಲ್ಸ್‌(Delhi capitals) ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು(Win) ಸಾಧಿಸಿದೆ. ಹುಡುಗರ ತಂಡ ಗೆಲ್ಲದಿದ್ದರೇನು ಮಹಿಳಾ ತಂಡವಾದರು ಟ್ರೋಫಿ ಗೆಲ್ಲುವ ಮೂಲಕ ಅಭಿಮಾನಿಗಳ ಮನ ತಣಿಸಿದ್ದಾರೆ. ಕಪ್ ಗೆಲ್ಲುವ ಜೊತೆಗೆ ಕೋಟಿ ಕೋಟಿ ಬಹುಮಾನವನ್ನು(Gifts) ಆರ್‌ಸಿಬಿ ಮಹಿಳಾ ತಂಡ (RCB Womens Team) ಬಾಚಿಕೊಂಡಿತು.

ಅರುಣ್ ಜೆಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ, ಸೋಫಿ ಮೊಲಿನೆಕ್ಸ್‌, ಶ್ರೇಯಾಂಕ ಪಾಟೀಲ್ ಅವರ ಸ್ಪಿನ್‌ ಮೋಡಿಗೆ ನಲುಗಿ 113 ರನ್‌ಗಳಿಗೆ ಆಲ್‌ಔಟ್‌ ಆಯಿತು. ಬೌಲಿಂಗ್‌ನಲ್ಲಿ ವಿಕೆಟ್‌ ಪಡೆಯದಿದ್ದರೂ ಕೊನೇ ಓವರ್‌ವರೆಗೂ ಹೋರಾಟ ನಡೆಸಿದ ಡೆಲ್ಲಿ ತಂಡ 8 ವಿಕೆಟ್‌ಗಳಿಂದ ಸೋಲನುಭವಿಸಿತು. ನಂತರ ವಿಜೇತ ತಂಡ ಹಾಗೂ ರನ್ನರ್‌ ಅಪ್‌ ತಂಡಕ್ಕೆ ನಗದು ಬಹುಮಾನ ನೀಡಲಾಯಿತು.

ಆರ್‌ಸಿಬಿ ದೋಚಿದ ಬಹುಮಾನದ ಮೊತ್ತ ಎಷ್ಟು?: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಫೈನಲ್‌ ಹಣಾಹಣಿಯಲ್ಲಿ 8 ವಿಕೆಟ್‌ಗಳಿಂದ ಗೆದ್ದು ಚಾಂಪಿಯನ್‌ ಆದ ಆರ್‌ಸಿಬಿ ಮಹಿಳಾ ತಂಡಕ್ಕೆ 6 ಕೋಟಿ ರೂ. ಗಳ ನಗದು ಬಹುಮಾನ ನೀಡಲಾಗಿದೆ. ರನ್ನರ್‌ ಅಪ್ ಪ್ರಶಸ್ತಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 3 ಕೋಟಿ ರೂ. ನಗದು ಬಹುಮಾನ ಪಡೆದುಕೊಂಡಿತು.

ಬಹುಮಾನದ ವಿವರ:
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಚಾಂಪಿಯನ್‌): 6 ಕೋಟಿ ರೂ.
ಡೆಲ್ಲಿ ಕ್ಯಾಪಿಟಲ್ಸ್‌ (ರನ್ನರ್‌ ಅಪ್‌): 3 ಕೋಟಿ ರೂ.
ಶಫಾಲಿ ವರ್ಮಾ (ಎಲೆಕ್ಟ್ರಿಕ್‌ ಸ್ಟ್ರೈಕರ್‌ ಆಫ್ ದಿ ಮ್ಯಾಚ್‌): 1 ಲಕ್ಷ ರೂ.
ಶಫಾಲಿ ವರ್ಮಾ (ಸಿಕ್ಸರ್‌ ಆಫ್‌ ದಿ ಮ್ಯಾಚ್‌): 1 ಲಕ್ಷ ರೂ.
ಶಫಾಲಿ ವರ್ಮಾ ( ಸಿಕ್ಸರ್‌ ಆಫ್‌ ದಿ ಸೀಸನ್‌): 5 ಲಕ್ಷ ರೂ.
ಶ್ರೇಯಾಂಕಾ ಪಾಟೀಲ್‌ (ಉದಯೋನ್ಮುಖ ಆಟಗಾರ್ತಿ): 5 ಲಕ್ಷ ರೂ.
ಎಲಿಸ್‌ ಪೆರ್ರಿ (ಆರಂಜ್‌ ಕ್ಯಾಪ್): 5 ಲಕ್ಷ ರೂ.
ಶ್ರೇಯಾಂಕಾ ಪಾಟೀಲ್ (ಪರ್ಪಲ್‌ ಕ್ಯಾಪ್‌): 5 ಲಕ್ಷ ರೂ.
ದೀಪ್ತಿ ಶರ್ಮಾ (ಅತ್ಯಂತ ಮೌಲ್ಯಯುತ ಆಟಗಾರ್ತಿ): 5 ಲಕ್ಷ ರೂ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

15 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

22 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

22 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

22 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

22 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

22 hours ago