Advertisement
MIRROR FOCUS

ಟ್ರೋಫಿ ಗೆದ್ದ RCB ಮಹಿಳಾ ತಂಡಕ್ಕೆ ಕೋಟಿ ಕೋಟಿ ಬಹುಮಾನ | ಆರ್‌ಸಿಬಿ ಮಹಿಳಾ ಮಣಿಗಳು ದೋಚಿದ ಬಹುಮಾನದ ಮೊತ್ತ ಎಷ್ಟು?

Share

ಈ ಸಲ ಕಪ್‌(Cup) ನಮ್ಮದೇ.. ಈ ಸಲ ಕಪ್‌ ನಮ್ಮದೆ ಅಂತ ಬೆಂಗಳೂರು ರಾಯಲ್‌ ಚಾಲೆಂಜರ್ಸ್‌(RCB) ಅಭಿಮಾನಿಗಳು(Fans) ಸತತ 16 ವರುಷಗಳಿಂದ ಕಾಯುವಿಕೆಯ ಕನಸು ಈ ಬಾರಿ ನನಸು ಮಾಡಿದ್ದಾರೆ ಮಹಿಳಾ ಮಣಿಯರು. ಮಹಿಳಾ ಪ್ರೀಮಿಯರ್‌ ಲೀಗ್‌ನ (Women’s Premier League) ಫೈನಲ್‌ ಪಂದ್ಯದಲ್ಲಿ(Final match) ಡೆಲ್ಲಿ ಕ್ಯಾಪಿಟಲ್ಸ್‌(Delhi capitals) ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು(Win) ಸಾಧಿಸಿದೆ. ಹುಡುಗರ ತಂಡ ಗೆಲ್ಲದಿದ್ದರೇನು ಮಹಿಳಾ ತಂಡವಾದರು ಟ್ರೋಫಿ ಗೆಲ್ಲುವ ಮೂಲಕ ಅಭಿಮಾನಿಗಳ ಮನ ತಣಿಸಿದ್ದಾರೆ. ಕಪ್ ಗೆಲ್ಲುವ ಜೊತೆಗೆ ಕೋಟಿ ಕೋಟಿ ಬಹುಮಾನವನ್ನು(Gifts) ಆರ್‌ಸಿಬಿ ಮಹಿಳಾ ತಂಡ (RCB Womens Team) ಬಾಚಿಕೊಂಡಿತು.

ಅರುಣ್ ಜೆಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ, ಸೋಫಿ ಮೊಲಿನೆಕ್ಸ್‌, ಶ್ರೇಯಾಂಕ ಪಾಟೀಲ್ ಅವರ ಸ್ಪಿನ್‌ ಮೋಡಿಗೆ ನಲುಗಿ 113 ರನ್‌ಗಳಿಗೆ ಆಲ್‌ಔಟ್‌ ಆಯಿತು. ಬೌಲಿಂಗ್‌ನಲ್ಲಿ ವಿಕೆಟ್‌ ಪಡೆಯದಿದ್ದರೂ ಕೊನೇ ಓವರ್‌ವರೆಗೂ ಹೋರಾಟ ನಡೆಸಿದ ಡೆಲ್ಲಿ ತಂಡ 8 ವಿಕೆಟ್‌ಗಳಿಂದ ಸೋಲನುಭವಿಸಿತು. ನಂತರ ವಿಜೇತ ತಂಡ ಹಾಗೂ ರನ್ನರ್‌ ಅಪ್‌ ತಂಡಕ್ಕೆ ನಗದು ಬಹುಮಾನ ನೀಡಲಾಯಿತು.

ಆರ್‌ಸಿಬಿ ದೋಚಿದ ಬಹುಮಾನದ ಮೊತ್ತ ಎಷ್ಟು?: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಫೈನಲ್‌ ಹಣಾಹಣಿಯಲ್ಲಿ 8 ವಿಕೆಟ್‌ಗಳಿಂದ ಗೆದ್ದು ಚಾಂಪಿಯನ್‌ ಆದ ಆರ್‌ಸಿಬಿ ಮಹಿಳಾ ತಂಡಕ್ಕೆ 6 ಕೋಟಿ ರೂ. ಗಳ ನಗದು ಬಹುಮಾನ ನೀಡಲಾಗಿದೆ. ರನ್ನರ್‌ ಅಪ್ ಪ್ರಶಸ್ತಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 3 ಕೋಟಿ ರೂ. ನಗದು ಬಹುಮಾನ ಪಡೆದುಕೊಂಡಿತು.

ಬಹುಮಾನದ ವಿವರ:
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಚಾಂಪಿಯನ್‌): 6 ಕೋಟಿ ರೂ.
ಡೆಲ್ಲಿ ಕ್ಯಾಪಿಟಲ್ಸ್‌ (ರನ್ನರ್‌ ಅಪ್‌): 3 ಕೋಟಿ ರೂ.
ಶಫಾಲಿ ವರ್ಮಾ (ಎಲೆಕ್ಟ್ರಿಕ್‌ ಸ್ಟ್ರೈಕರ್‌ ಆಫ್ ದಿ ಮ್ಯಾಚ್‌): 1 ಲಕ್ಷ ರೂ.
ಶಫಾಲಿ ವರ್ಮಾ (ಸಿಕ್ಸರ್‌ ಆಫ್‌ ದಿ ಮ್ಯಾಚ್‌): 1 ಲಕ್ಷ ರೂ.
ಶಫಾಲಿ ವರ್ಮಾ ( ಸಿಕ್ಸರ್‌ ಆಫ್‌ ದಿ ಸೀಸನ್‌): 5 ಲಕ್ಷ ರೂ.
ಶ್ರೇಯಾಂಕಾ ಪಾಟೀಲ್‌ (ಉದಯೋನ್ಮುಖ ಆಟಗಾರ್ತಿ): 5 ಲಕ್ಷ ರೂ.
ಎಲಿಸ್‌ ಪೆರ್ರಿ (ಆರಂಜ್‌ ಕ್ಯಾಪ್): 5 ಲಕ್ಷ ರೂ.
ಶ್ರೇಯಾಂಕಾ ಪಾಟೀಲ್ (ಪರ್ಪಲ್‌ ಕ್ಯಾಪ್‌): 5 ಲಕ್ಷ ರೂ.
ದೀಪ್ತಿ ಶರ್ಮಾ (ಅತ್ಯಂತ ಮೌಲ್ಯಯುತ ಆಟಗಾರ್ತಿ): 5 ಲಕ್ಷ ರೂ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

3 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

12 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

20 hours ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

1 day ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

1 day ago

ಶ್ರೀಲಂಕಾದ ರಫ್ತು ಮಾರುಕಟ್ಟೆಯಲ್ಲಿ ಭಾರತದ ಬಲಿಷ್ಠ ಏರಿಕೆ..! – ತೆಂಗು ಆಧಾರಿತ ಉತ್ಪನ್ನಗಳ ರಫ್ತು 23.49 ಶೇಕಡಾ ಏರಿಕೆ

2026 ರ ಜನವರಿ–ಏಪ್ರಿಲ್ ಅವಧಿಯಲ್ಲಿ ಭಾರತವು ಶ್ರೀಲಂಕಾದ ಎರಡನೇ ಅತಿದೊಡ್ಡ ರಫ್ತು ಗಮ್ಯಸ್ಥಾನವಾಗಿ…

1 day ago