ಸಾಲು ಸಾಲು ರಜೆ | ದೇವಸ್ಥಾನಗಳಲ್ಲಿ ಸರದಿ ಸಾಲು | ತಿರುಪತಿಯಲ್ಲಿ ದೇವರ ದರ್ಶನ ಪಡೆಯಲು 40 ಗಂಟೆ |

November 13, 2022
11:16 AM

ವಾರಾಂತ್ಯದ ರಜೆ ಹಾಗೂ ವಿವಿಧ ರಜೆಯ ಕಾರಣದಿಂದ  ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ಸಾಲು ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲೂ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಈ ನಡುವೆ ತಿರುಪತಿ ತಿರುಮಲದಲ್ಲೂ ಭಕ್ತ ಸಾಗರವೇ ಕಂಡುಬಂದಿದ್ದು ದೇವರ ದರ್ಶನಕ್ಕಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ದರ್ಶನ ಪಡೆಯಲು 40 ಗಂಟೆ ಹಾಗೂ ವಿಶೇಷ ದರ್ಶನಕ್ಕೆ ನಾಲ್ಕು ಗಂಟೆ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ತಿರುಮಲದಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಚಳಿ ಹೆಚ್ಚಿದ್ದರಿಂದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸತತ ರಜೆ ಇರುವುದರಿಂದ ವಿವಿಧೆಡೆಯಿಂದ ಭಕ್ತರು ಸ್ವಂತ ವಾಹನದಲ್ಲಿ ತಿರುಮಲಕ್ಕೆ ತೆರಳಿದರು. ಇದರಿಂದ ತಿರುಪತಿಯ ಚೆಕ್ ಪಾಯಿಂಟ್ ಗಳಲ್ಲಿ ತಪಾಸಣೆಗಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲೂ  ಜನಸಂದಣಿ ಕಂಡುಬಂದಿದೆ. ವಿವಿಧ ಸೇವೆಗಳಿಗೆ ಹಾಗೂ ದೇವರ ದರ್ಶನಕ್ಕೆ ಸರದಿ ಸಾಲು ಕಂಡುಬಂದಿದೆ. ಶುಕ್ರವಾರದಿಂದ ಸೋಮವಾರದವರೆಗೆ ಶಾಲಾ ಮಕ್ಕಳಿಗೆ ವಿವಿಧ ಕಾರಣಗಳಿಗೆ ಶಾಲೆಗೆ ರಜೆ ಇರುವ ಕಾರಣದಿಂದ ತೀರ್ಥಯಾತ್ರೆಯನ್ನು ಜನರು ಕೈಗೊಂಡಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ
ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group