ವಾರಾಂತ್ಯದ ರಜೆ ಹಾಗೂ ವಿವಿಧ ರಜೆಯ ಕಾರಣದಿಂದ ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ಸಾಲು ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲೂ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಈ ನಡುವೆ ತಿರುಪತಿ ತಿರುಮಲದಲ್ಲೂ ಭಕ್ತ ಸಾಗರವೇ ಕಂಡುಬಂದಿದ್ದು ದೇವರ ದರ್ಶನಕ್ಕಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ದರ್ಶನ ಪಡೆಯಲು 40 ಗಂಟೆ ಹಾಗೂ ವಿಶೇಷ ದರ್ಶನಕ್ಕೆ ನಾಲ್ಕು ಗಂಟೆ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಿರುಮಲದಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಚಳಿ ಹೆಚ್ಚಿದ್ದರಿಂದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸತತ ರಜೆ ಇರುವುದರಿಂದ ವಿವಿಧೆಡೆಯಿಂದ ಭಕ್ತರು ಸ್ವಂತ ವಾಹನದಲ್ಲಿ ತಿರುಮಲಕ್ಕೆ ತೆರಳಿದರು. ಇದರಿಂದ ತಿರುಪತಿಯ ಚೆಕ್ ಪಾಯಿಂಟ್ ಗಳಲ್ಲಿ ತಪಾಸಣೆಗಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲೂ ಜನಸಂದಣಿ ಕಂಡುಬಂದಿದೆ. ವಿವಿಧ ಸೇವೆಗಳಿಗೆ ಹಾಗೂ ದೇವರ ದರ್ಶನಕ್ಕೆ ಸರದಿ ಸಾಲು ಕಂಡುಬಂದಿದೆ. ಶುಕ್ರವಾರದಿಂದ ಸೋಮವಾರದವರೆಗೆ ಶಾಲಾ ಮಕ್ಕಳಿಗೆ ವಿವಿಧ ಕಾರಣಗಳಿಗೆ ಶಾಲೆಗೆ ರಜೆ ಇರುವ ಕಾರಣದಿಂದ ತೀರ್ಥಯಾತ್ರೆಯನ್ನು ಜನರು ಕೈಗೊಂಡಿದ್ದಾರೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…