ವಾರಾಂತ್ಯದ ರಜೆ ಹಾಗೂ ವಿವಿಧ ರಜೆಯ ಕಾರಣದಿಂದ ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ಸಾಲು ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲೂ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಈ ನಡುವೆ ತಿರುಪತಿ ತಿರುಮಲದಲ್ಲೂ ಭಕ್ತ ಸಾಗರವೇ ಕಂಡುಬಂದಿದ್ದು ದೇವರ ದರ್ಶನಕ್ಕಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ದರ್ಶನ ಪಡೆಯಲು 40 ಗಂಟೆ ಹಾಗೂ ವಿಶೇಷ ದರ್ಶನಕ್ಕೆ ನಾಲ್ಕು ಗಂಟೆ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಿರುಮಲದಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಚಳಿ ಹೆಚ್ಚಿದ್ದರಿಂದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸತತ ರಜೆ ಇರುವುದರಿಂದ ವಿವಿಧೆಡೆಯಿಂದ ಭಕ್ತರು ಸ್ವಂತ ವಾಹನದಲ್ಲಿ ತಿರುಮಲಕ್ಕೆ ತೆರಳಿದರು. ಇದರಿಂದ ತಿರುಪತಿಯ ಚೆಕ್ ಪಾಯಿಂಟ್ ಗಳಲ್ಲಿ ತಪಾಸಣೆಗಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲೂ ಜನಸಂದಣಿ ಕಂಡುಬಂದಿದೆ. ವಿವಿಧ ಸೇವೆಗಳಿಗೆ ಹಾಗೂ ದೇವರ ದರ್ಶನಕ್ಕೆ ಸರದಿ ಸಾಲು ಕಂಡುಬಂದಿದೆ. ಶುಕ್ರವಾರದಿಂದ ಸೋಮವಾರದವರೆಗೆ ಶಾಲಾ ಮಕ್ಕಳಿಗೆ ವಿವಿಧ ಕಾರಣಗಳಿಗೆ ಶಾಲೆಗೆ ರಜೆ ಇರುವ ಕಾರಣದಿಂದ ತೀರ್ಥಯಾತ್ರೆಯನ್ನು ಜನರು ಕೈಗೊಂಡಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…