ವಾರಾಂತ್ಯದ ರಜೆ ಹಾಗೂ ವಿವಿಧ ರಜೆಯ ಕಾರಣದಿಂದ ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ಸಾಲು ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲೂ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಈ ನಡುವೆ ತಿರುಪತಿ ತಿರುಮಲದಲ್ಲೂ ಭಕ್ತ ಸಾಗರವೇ ಕಂಡುಬಂದಿದ್ದು ದೇವರ ದರ್ಶನಕ್ಕಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ದರ್ಶನ ಪಡೆಯಲು 40 ಗಂಟೆ ಹಾಗೂ ವಿಶೇಷ ದರ್ಶನಕ್ಕೆ ನಾಲ್ಕು ಗಂಟೆ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಿರುಮಲದಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಚಳಿ ಹೆಚ್ಚಿದ್ದರಿಂದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸತತ ರಜೆ ಇರುವುದರಿಂದ ವಿವಿಧೆಡೆಯಿಂದ ಭಕ್ತರು ಸ್ವಂತ ವಾಹನದಲ್ಲಿ ತಿರುಮಲಕ್ಕೆ ತೆರಳಿದರು. ಇದರಿಂದ ತಿರುಪತಿಯ ಚೆಕ್ ಪಾಯಿಂಟ್ ಗಳಲ್ಲಿ ತಪಾಸಣೆಗಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲೂ ಜನಸಂದಣಿ ಕಂಡುಬಂದಿದೆ. ವಿವಿಧ ಸೇವೆಗಳಿಗೆ ಹಾಗೂ ದೇವರ ದರ್ಶನಕ್ಕೆ ಸರದಿ ಸಾಲು ಕಂಡುಬಂದಿದೆ. ಶುಕ್ರವಾರದಿಂದ ಸೋಮವಾರದವರೆಗೆ ಶಾಲಾ ಮಕ್ಕಳಿಗೆ ವಿವಿಧ ಕಾರಣಗಳಿಗೆ ಶಾಲೆಗೆ ರಜೆ ಇರುವ ಕಾರಣದಿಂದ ತೀರ್ಥಯಾತ್ರೆಯನ್ನು ಜನರು ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…