Advertisement
ಸುದ್ದಿಗಳು

ಸಾಲು ಸಾಲು ರಜೆ | ದೇವಸ್ಥಾನಗಳಲ್ಲಿ ಸರದಿ ಸಾಲು | ತಿರುಪತಿಯಲ್ಲಿ ದೇವರ ದರ್ಶನ ಪಡೆಯಲು 40 ಗಂಟೆ |

Share

ವಾರಾಂತ್ಯದ ರಜೆ ಹಾಗೂ ವಿವಿಧ ರಜೆಯ ಕಾರಣದಿಂದ  ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ಸಾಲು ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲೂ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಈ ನಡುವೆ ತಿರುಪತಿ ತಿರುಮಲದಲ್ಲೂ ಭಕ್ತ ಸಾಗರವೇ ಕಂಡುಬಂದಿದ್ದು ದೇವರ ದರ್ಶನಕ್ಕಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ದರ್ಶನ ಪಡೆಯಲು 40 ಗಂಟೆ ಹಾಗೂ ವಿಶೇಷ ದರ್ಶನಕ್ಕೆ ನಾಲ್ಕು ಗಂಟೆ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿರುಮಲದಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಚಳಿ ಹೆಚ್ಚಿದ್ದರಿಂದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸತತ ರಜೆ ಇರುವುದರಿಂದ ವಿವಿಧೆಡೆಯಿಂದ ಭಕ್ತರು ಸ್ವಂತ ವಾಹನದಲ್ಲಿ ತಿರುಮಲಕ್ಕೆ ತೆರಳಿದರು. ಇದರಿಂದ ತಿರುಪತಿಯ ಚೆಕ್ ಪಾಯಿಂಟ್ ಗಳಲ್ಲಿ ತಪಾಸಣೆಗಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲೂ  ಜನಸಂದಣಿ ಕಂಡುಬಂದಿದೆ. ವಿವಿಧ ಸೇವೆಗಳಿಗೆ ಹಾಗೂ ದೇವರ ದರ್ಶನಕ್ಕೆ ಸರದಿ ಸಾಲು ಕಂಡುಬಂದಿದೆ. ಶುಕ್ರವಾರದಿಂದ ಸೋಮವಾರದವರೆಗೆ ಶಾಲಾ ಮಕ್ಕಳಿಗೆ ವಿವಿಧ ಕಾರಣಗಳಿಗೆ ಶಾಲೆಗೆ ರಜೆ ಇರುವ ಕಾರಣದಿಂದ ತೀರ್ಥಯಾತ್ರೆಯನ್ನು ಜನರು ಕೈಗೊಂಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

23 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

23 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

24 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago