#ಸಾಮರಸ್ಯ | ಮನುಷ್ಯತ್ವಕ್ಕೆ ಮುಗಿಲಾದದು ಇನ್ನೊಂದಿಲ್ಲ | ಧರ್ಮವೂ ಮೀರಿದ ಮಾನವೀಯತೆ |

August 8, 2022
5:59 PM

ಕೋಮು ಸೂಕ್ಷ್ಮ ಜಿಲ್ಲೆಯಾಗಿ ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲಿ  ಕಾಣಿಸಿಕೊಂಡಿದೆ. ಏನೇ ನಡೆದರೂ ಅದಕ್ಕೆ ಕೋಮು , ಧರ್ಮದ ಬಣ್ಣ ಕಾಣುತ್ತಿತ್ತು. ಅದಕ್ಕೂ ಮಿಗಿಲಾದ ಮನುಷ್ಯತ್ವ, ಮಾನವೀಯತೆಯ ಬೆಳಕು ದ ಕ ಜಿಲ್ಲೆಯಲ್ಲಿದೆ. ಅದಕ್ಕೆ ಇನ್ನೊಂದು ಉದಾಹರಣೆ ಇಲ್ಲಿದೆ.

ವಾರದ ಹಿಂದೆ ಸುಳ್ಯ ತಾಲೂಕಿನ ಹರಿಹರ ಬಳಿ ಪ್ರವಾಹದಿಂದ ಸೇತುವೆಯ ತುಂಬೆಲ್ಲಾ ಕಾಡು, ಮರ ತುಂಬಿತ್ತು. ಅದನ್ನು ತೆರವು ಮಾಡುವ ವೇಳೆ ಕ್ರೇನ್‌ ಚಾಲಕ ಹೊಳೆಗೆ ಬಿದ್ದು ಅವರನ್ನು ರಕ್ಷಣೆ ಮಾಡಿರುವ ಸಂಗತಿ ಸುದ್ದಿಯಾಗಿತ್ತು. ಹೊಳೆಗೆ ಬಿದ್ದವರು ಶರೀಫ್‌, ರಕ್ಷಣೆ ಮಾಡಿದವರು ಸೋಮಶೇಖರ ಕೂಜುಗೋಡು. ಇದೀಗ ಅದೇ ಮಾದರಿಯಲ್ಲಿ ಇನ್ನೊಂದು ಘಟನೆ ಬೆಳ್ಳಾರೆ ಬಳಿಯ ಚೆನ್ನಾವರದಲ್ಲಿ ನಡೆದಿದೆ.

ಬೆಳ್ಳಾರೆ ಸಮೀಪದ ಚೆನ್ನಾವರ ಎಂಬಲ್ಲಿ ರಸ್ತೆ ನಡುವೆ ಹೃದಯಾಘಾತ ಸಂಭವಿಸಿ ರಸ್ತೆಯಲ್ಲಿ ಬಿದ್ದಿದ್ದ ಜಲೀಲ್ ಎಂಬವರನ್ನು ಅದೇ ರಸ್ತೆಯಿಂದಾಗಿ ತೆರಳುತ್ತಿದ್ದ ಅಭಿಷೇಕ್ ರೈ ಯವರು ತನ್ನ ಕಾರಿನಲ್ಲಿ ಕೆಯ್ಯೂರು ಆಸ್ಪತ್ರೆಗೆ ಕರೆದೊಯ್ದಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳ್ಳಾರೆಯ ಹದಗೆಟ್ಟಿರುವ ಪ್ರಸ್ತುತ ಪರಿಸ್ಥಿತಿಯ ಮದ್ಯೆಯು ಅಭಿಷೇಕ್ ರೈಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ದ ಕ ಜಿಲ್ಲೆಯಲ್ಲಿ ಕೋಮು ದ್ವೇಷದ ಭಾವನೆಗಿಂತಲೂ ಮಾನವೀಯತೆ, ಸ್ನೇಹ, ಪ್ರೀತಿಯ ಭಾವನೆಗಳು ವ್ಯಾಪಕ ಇದೆ. ಆದರೆ ಎಲ್ಲೋ ಕೆಲವು ಕಡೆ ಧರ್ಮದ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಕೋಲಾಹಲ ನಡೆಯುತ್ತಿದೆ. ಬಹುಪಾಲು ಮಂದಿ ಮನುಷ್ಯತ್ವಕ್ಕೆ ಬೆಲೆ ನೀಡುವವರು ಎಂಬುದು ಇಲ್ಲಿ ಮತ್ತೆ ಸಾಬೀತಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror