Advertisement
ಸುದ್ದಿಗಳು

#ಸಾಮರಸ್ಯ | ಮನುಷ್ಯತ್ವಕ್ಕೆ ಮುಗಿಲಾದದು ಇನ್ನೊಂದಿಲ್ಲ | ಧರ್ಮವೂ ಮೀರಿದ ಮಾನವೀಯತೆ |

Share

ಕೋಮು ಸೂಕ್ಷ್ಮ ಜಿಲ್ಲೆಯಾಗಿ ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲಿ  ಕಾಣಿಸಿಕೊಂಡಿದೆ. ಏನೇ ನಡೆದರೂ ಅದಕ್ಕೆ ಕೋಮು , ಧರ್ಮದ ಬಣ್ಣ ಕಾಣುತ್ತಿತ್ತು. ಅದಕ್ಕೂ ಮಿಗಿಲಾದ ಮನುಷ್ಯತ್ವ, ಮಾನವೀಯತೆಯ ಬೆಳಕು ದ ಕ ಜಿಲ್ಲೆಯಲ್ಲಿದೆ. ಅದಕ್ಕೆ ಇನ್ನೊಂದು ಉದಾಹರಣೆ ಇಲ್ಲಿದೆ.

Advertisement
Advertisement
Advertisement
Advertisement

ವಾರದ ಹಿಂದೆ ಸುಳ್ಯ ತಾಲೂಕಿನ ಹರಿಹರ ಬಳಿ ಪ್ರವಾಹದಿಂದ ಸೇತುವೆಯ ತುಂಬೆಲ್ಲಾ ಕಾಡು, ಮರ ತುಂಬಿತ್ತು. ಅದನ್ನು ತೆರವು ಮಾಡುವ ವೇಳೆ ಕ್ರೇನ್‌ ಚಾಲಕ ಹೊಳೆಗೆ ಬಿದ್ದು ಅವರನ್ನು ರಕ್ಷಣೆ ಮಾಡಿರುವ ಸಂಗತಿ ಸುದ್ದಿಯಾಗಿತ್ತು. ಹೊಳೆಗೆ ಬಿದ್ದವರು ಶರೀಫ್‌, ರಕ್ಷಣೆ ಮಾಡಿದವರು ಸೋಮಶೇಖರ ಕೂಜುಗೋಡು. ಇದೀಗ ಅದೇ ಮಾದರಿಯಲ್ಲಿ ಇನ್ನೊಂದು ಘಟನೆ ಬೆಳ್ಳಾರೆ ಬಳಿಯ ಚೆನ್ನಾವರದಲ್ಲಿ ನಡೆದಿದೆ.

Advertisement

ಬೆಳ್ಳಾರೆ ಸಮೀಪದ ಚೆನ್ನಾವರ ಎಂಬಲ್ಲಿ ರಸ್ತೆ ನಡುವೆ ಹೃದಯಾಘಾತ ಸಂಭವಿಸಿ ರಸ್ತೆಯಲ್ಲಿ ಬಿದ್ದಿದ್ದ ಜಲೀಲ್ ಎಂಬವರನ್ನು ಅದೇ ರಸ್ತೆಯಿಂದಾಗಿ ತೆರಳುತ್ತಿದ್ದ ಅಭಿಷೇಕ್ ರೈ ಯವರು ತನ್ನ ಕಾರಿನಲ್ಲಿ ಕೆಯ್ಯೂರು ಆಸ್ಪತ್ರೆಗೆ ಕರೆದೊಯ್ದಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳ್ಳಾರೆಯ ಹದಗೆಟ್ಟಿರುವ ಪ್ರಸ್ತುತ ಪರಿಸ್ಥಿತಿಯ ಮದ್ಯೆಯು ಅಭಿಷೇಕ್ ರೈಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ದ ಕ ಜಿಲ್ಲೆಯಲ್ಲಿ ಕೋಮು ದ್ವೇಷದ ಭಾವನೆಗಿಂತಲೂ ಮಾನವೀಯತೆ, ಸ್ನೇಹ, ಪ್ರೀತಿಯ ಭಾವನೆಗಳು ವ್ಯಾಪಕ ಇದೆ. ಆದರೆ ಎಲ್ಲೋ ಕೆಲವು ಕಡೆ ಧರ್ಮದ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಕೋಲಾಹಲ ನಡೆಯುತ್ತಿದೆ. ಬಹುಪಾಲು ಮಂದಿ ಮನುಷ್ಯತ್ವಕ್ಕೆ ಬೆಲೆ ನೀಡುವವರು ಎಂಬುದು ಇಲ್ಲಿ ಮತ್ತೆ ಸಾಬೀತಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

8 mins ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

50 mins ago

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

17 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

17 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

1 day ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

1 day ago