ಸುದ್ದಿಗಳು

#ಸಾಮರಸ್ಯ | ಮನುಷ್ಯತ್ವಕ್ಕೆ ಮುಗಿಲಾದದು ಇನ್ನೊಂದಿಲ್ಲ | ಧರ್ಮವೂ ಮೀರಿದ ಮಾನವೀಯತೆ |

Share

ಕೋಮು ಸೂಕ್ಷ್ಮ ಜಿಲ್ಲೆಯಾಗಿ ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲಿ  ಕಾಣಿಸಿಕೊಂಡಿದೆ. ಏನೇ ನಡೆದರೂ ಅದಕ್ಕೆ ಕೋಮು , ಧರ್ಮದ ಬಣ್ಣ ಕಾಣುತ್ತಿತ್ತು. ಅದಕ್ಕೂ ಮಿಗಿಲಾದ ಮನುಷ್ಯತ್ವ, ಮಾನವೀಯತೆಯ ಬೆಳಕು ದ ಕ ಜಿಲ್ಲೆಯಲ್ಲಿದೆ. ಅದಕ್ಕೆ ಇನ್ನೊಂದು ಉದಾಹರಣೆ ಇಲ್ಲಿದೆ.

ವಾರದ ಹಿಂದೆ ಸುಳ್ಯ ತಾಲೂಕಿನ ಹರಿಹರ ಬಳಿ ಪ್ರವಾಹದಿಂದ ಸೇತುವೆಯ ತುಂಬೆಲ್ಲಾ ಕಾಡು, ಮರ ತುಂಬಿತ್ತು. ಅದನ್ನು ತೆರವು ಮಾಡುವ ವೇಳೆ ಕ್ರೇನ್‌ ಚಾಲಕ ಹೊಳೆಗೆ ಬಿದ್ದು ಅವರನ್ನು ರಕ್ಷಣೆ ಮಾಡಿರುವ ಸಂಗತಿ ಸುದ್ದಿಯಾಗಿತ್ತು. ಹೊಳೆಗೆ ಬಿದ್ದವರು ಶರೀಫ್‌, ರಕ್ಷಣೆ ಮಾಡಿದವರು ಸೋಮಶೇಖರ ಕೂಜುಗೋಡು. ಇದೀಗ ಅದೇ ಮಾದರಿಯಲ್ಲಿ ಇನ್ನೊಂದು ಘಟನೆ ಬೆಳ್ಳಾರೆ ಬಳಿಯ ಚೆನ್ನಾವರದಲ್ಲಿ ನಡೆದಿದೆ.

ಬೆಳ್ಳಾರೆ ಸಮೀಪದ ಚೆನ್ನಾವರ ಎಂಬಲ್ಲಿ ರಸ್ತೆ ನಡುವೆ ಹೃದಯಾಘಾತ ಸಂಭವಿಸಿ ರಸ್ತೆಯಲ್ಲಿ ಬಿದ್ದಿದ್ದ ಜಲೀಲ್ ಎಂಬವರನ್ನು ಅದೇ ರಸ್ತೆಯಿಂದಾಗಿ ತೆರಳುತ್ತಿದ್ದ ಅಭಿಷೇಕ್ ರೈ ಯವರು ತನ್ನ ಕಾರಿನಲ್ಲಿ ಕೆಯ್ಯೂರು ಆಸ್ಪತ್ರೆಗೆ ಕರೆದೊಯ್ದಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳ್ಳಾರೆಯ ಹದಗೆಟ್ಟಿರುವ ಪ್ರಸ್ತುತ ಪರಿಸ್ಥಿತಿಯ ಮದ್ಯೆಯು ಅಭಿಷೇಕ್ ರೈಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ದ ಕ ಜಿಲ್ಲೆಯಲ್ಲಿ ಕೋಮು ದ್ವೇಷದ ಭಾವನೆಗಿಂತಲೂ ಮಾನವೀಯತೆ, ಸ್ನೇಹ, ಪ್ರೀತಿಯ ಭಾವನೆಗಳು ವ್ಯಾಪಕ ಇದೆ. ಆದರೆ ಎಲ್ಲೋ ಕೆಲವು ಕಡೆ ಧರ್ಮದ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಕೋಲಾಹಲ ನಡೆಯುತ್ತಿದೆ. ಬಹುಪಾಲು ಮಂದಿ ಮನುಷ್ಯತ್ವಕ್ಕೆ ಬೆಲೆ ನೀಡುವವರು ಎಂಬುದು ಇಲ್ಲಿ ಮತ್ತೆ ಸಾಬೀತಾಗಿದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

15 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

22 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

23 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

23 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago