Advertisement
ಸುದ್ದಿಗಳು

#ಸಾಮರಸ್ಯ | ಮನುಷ್ಯತ್ವಕ್ಕೆ ಮುಗಿಲಾದದು ಇನ್ನೊಂದಿಲ್ಲ | ಧರ್ಮವೂ ಮೀರಿದ ಮಾನವೀಯತೆ |

Share

ಕೋಮು ಸೂಕ್ಷ್ಮ ಜಿಲ್ಲೆಯಾಗಿ ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲಿ  ಕಾಣಿಸಿಕೊಂಡಿದೆ. ಏನೇ ನಡೆದರೂ ಅದಕ್ಕೆ ಕೋಮು , ಧರ್ಮದ ಬಣ್ಣ ಕಾಣುತ್ತಿತ್ತು. ಅದಕ್ಕೂ ಮಿಗಿಲಾದ ಮನುಷ್ಯತ್ವ, ಮಾನವೀಯತೆಯ ಬೆಳಕು ದ ಕ ಜಿಲ್ಲೆಯಲ್ಲಿದೆ. ಅದಕ್ಕೆ ಇನ್ನೊಂದು ಉದಾಹರಣೆ ಇಲ್ಲಿದೆ.

ವಾರದ ಹಿಂದೆ ಸುಳ್ಯ ತಾಲೂಕಿನ ಹರಿಹರ ಬಳಿ ಪ್ರವಾಹದಿಂದ ಸೇತುವೆಯ ತುಂಬೆಲ್ಲಾ ಕಾಡು, ಮರ ತುಂಬಿತ್ತು. ಅದನ್ನು ತೆರವು ಮಾಡುವ ವೇಳೆ ಕ್ರೇನ್‌ ಚಾಲಕ ಹೊಳೆಗೆ ಬಿದ್ದು ಅವರನ್ನು ರಕ್ಷಣೆ ಮಾಡಿರುವ ಸಂಗತಿ ಸುದ್ದಿಯಾಗಿತ್ತು. ಹೊಳೆಗೆ ಬಿದ್ದವರು ಶರೀಫ್‌, ರಕ್ಷಣೆ ಮಾಡಿದವರು ಸೋಮಶೇಖರ ಕೂಜುಗೋಡು. ಇದೀಗ ಅದೇ ಮಾದರಿಯಲ್ಲಿ ಇನ್ನೊಂದು ಘಟನೆ ಬೆಳ್ಳಾರೆ ಬಳಿಯ ಚೆನ್ನಾವರದಲ್ಲಿ ನಡೆದಿದೆ.

ಬೆಳ್ಳಾರೆ ಸಮೀಪದ ಚೆನ್ನಾವರ ಎಂಬಲ್ಲಿ ರಸ್ತೆ ನಡುವೆ ಹೃದಯಾಘಾತ ಸಂಭವಿಸಿ ರಸ್ತೆಯಲ್ಲಿ ಬಿದ್ದಿದ್ದ ಜಲೀಲ್ ಎಂಬವರನ್ನು ಅದೇ ರಸ್ತೆಯಿಂದಾಗಿ ತೆರಳುತ್ತಿದ್ದ ಅಭಿಷೇಕ್ ರೈ ಯವರು ತನ್ನ ಕಾರಿನಲ್ಲಿ ಕೆಯ್ಯೂರು ಆಸ್ಪತ್ರೆಗೆ ಕರೆದೊಯ್ದಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳ್ಳಾರೆಯ ಹದಗೆಟ್ಟಿರುವ ಪ್ರಸ್ತುತ ಪರಿಸ್ಥಿತಿಯ ಮದ್ಯೆಯು ಅಭಿಷೇಕ್ ರೈಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ದ ಕ ಜಿಲ್ಲೆಯಲ್ಲಿ ಕೋಮು ದ್ವೇಷದ ಭಾವನೆಗಿಂತಲೂ ಮಾನವೀಯತೆ, ಸ್ನೇಹ, ಪ್ರೀತಿಯ ಭಾವನೆಗಳು ವ್ಯಾಪಕ ಇದೆ. ಆದರೆ ಎಲ್ಲೋ ಕೆಲವು ಕಡೆ ಧರ್ಮದ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಕೋಲಾಹಲ ನಡೆಯುತ್ತಿದೆ. ಬಹುಪಾಲು ಮಂದಿ ಮನುಷ್ಯತ್ವಕ್ಕೆ ಬೆಲೆ ನೀಡುವವರು ಎಂಬುದು ಇಲ್ಲಿ ಮತ್ತೆ ಸಾಬೀತಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

5 minutes ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

7 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

9 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

16 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

18 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

1 day ago