Advertisement
ಸುದ್ದಿಗಳು

#ಸಾಮರಸ್ಯ | ಮನುಷ್ಯತ್ವಕ್ಕೆ ಮುಗಿಲಾದದು ಇನ್ನೊಂದಿಲ್ಲ | ಧರ್ಮವೂ ಮೀರಿದ ಮಾನವೀಯತೆ |

Share

ಕೋಮು ಸೂಕ್ಷ್ಮ ಜಿಲ್ಲೆಯಾಗಿ ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲಿ  ಕಾಣಿಸಿಕೊಂಡಿದೆ. ಏನೇ ನಡೆದರೂ ಅದಕ್ಕೆ ಕೋಮು , ಧರ್ಮದ ಬಣ್ಣ ಕಾಣುತ್ತಿತ್ತು. ಅದಕ್ಕೂ ಮಿಗಿಲಾದ ಮನುಷ್ಯತ್ವ, ಮಾನವೀಯತೆಯ ಬೆಳಕು ದ ಕ ಜಿಲ್ಲೆಯಲ್ಲಿದೆ. ಅದಕ್ಕೆ ಇನ್ನೊಂದು ಉದಾಹರಣೆ ಇಲ್ಲಿದೆ.

ವಾರದ ಹಿಂದೆ ಸುಳ್ಯ ತಾಲೂಕಿನ ಹರಿಹರ ಬಳಿ ಪ್ರವಾಹದಿಂದ ಸೇತುವೆಯ ತುಂಬೆಲ್ಲಾ ಕಾಡು, ಮರ ತುಂಬಿತ್ತು. ಅದನ್ನು ತೆರವು ಮಾಡುವ ವೇಳೆ ಕ್ರೇನ್‌ ಚಾಲಕ ಹೊಳೆಗೆ ಬಿದ್ದು ಅವರನ್ನು ರಕ್ಷಣೆ ಮಾಡಿರುವ ಸಂಗತಿ ಸುದ್ದಿಯಾಗಿತ್ತು. ಹೊಳೆಗೆ ಬಿದ್ದವರು ಶರೀಫ್‌, ರಕ್ಷಣೆ ಮಾಡಿದವರು ಸೋಮಶೇಖರ ಕೂಜುಗೋಡು. ಇದೀಗ ಅದೇ ಮಾದರಿಯಲ್ಲಿ ಇನ್ನೊಂದು ಘಟನೆ ಬೆಳ್ಳಾರೆ ಬಳಿಯ ಚೆನ್ನಾವರದಲ್ಲಿ ನಡೆದಿದೆ.

ಬೆಳ್ಳಾರೆ ಸಮೀಪದ ಚೆನ್ನಾವರ ಎಂಬಲ್ಲಿ ರಸ್ತೆ ನಡುವೆ ಹೃದಯಾಘಾತ ಸಂಭವಿಸಿ ರಸ್ತೆಯಲ್ಲಿ ಬಿದ್ದಿದ್ದ ಜಲೀಲ್ ಎಂಬವರನ್ನು ಅದೇ ರಸ್ತೆಯಿಂದಾಗಿ ತೆರಳುತ್ತಿದ್ದ ಅಭಿಷೇಕ್ ರೈ ಯವರು ತನ್ನ ಕಾರಿನಲ್ಲಿ ಕೆಯ್ಯೂರು ಆಸ್ಪತ್ರೆಗೆ ಕರೆದೊಯ್ದಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳ್ಳಾರೆಯ ಹದಗೆಟ್ಟಿರುವ ಪ್ರಸ್ತುತ ಪರಿಸ್ಥಿತಿಯ ಮದ್ಯೆಯು ಅಭಿಷೇಕ್ ರೈಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ದ ಕ ಜಿಲ್ಲೆಯಲ್ಲಿ ಕೋಮು ದ್ವೇಷದ ಭಾವನೆಗಿಂತಲೂ ಮಾನವೀಯತೆ, ಸ್ನೇಹ, ಪ್ರೀತಿಯ ಭಾವನೆಗಳು ವ್ಯಾಪಕ ಇದೆ. ಆದರೆ ಎಲ್ಲೋ ಕೆಲವು ಕಡೆ ಧರ್ಮದ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಕೋಲಾಹಲ ನಡೆಯುತ್ತಿದೆ. ಬಹುಪಾಲು ಮಂದಿ ಮನುಷ್ಯತ್ವಕ್ಕೆ ಬೆಲೆ ನೀಡುವವರು ಎಂಬುದು ಇಲ್ಲಿ ಮತ್ತೆ ಸಾಬೀತಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

22 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago