ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಿದ ನೂರಾರು ಮಂದಿ | ಯಾದಗಿರಿಯಲ್ಲಿ ನಡೆದ ಕಾರ್ಯಕ್ರಮ |

October 14, 2022
11:12 PM

ಹಿಂದೂ ಧರ್ಮವನ್ನು ತ್ಯಜಿಸಿ ನೂರಾರು ಜನರು ಬೌದ್ಧ ಧರ್ಮವನ್ನು ಸ್ವೀಕರಿಸಿದ ಘಟನೆ ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ. ಸುಮಾರು 350 ಕ್ಕೂ ಅಧಿಕ ದಲಿತ ಸಮುದಾಯದ ಮಂದಿ ಬೌದ್ಧ ಧರ್ಮ ಸ್ವೀಕರಿಸಿದರು.ಬಿ.ಆರ್.ಅಂಬೇಡ್ಕರ್ ಮೊಮ್ಮಗಳಾದ ರಮಾಬಾಯಿ ನೇತೃತ್ವದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಕಾರ್ಯಕ್ರಮ ನಡೆಯಿತು. 

ನೂರಾರು ಜನರಿಗೆ ವರಜ್ಯೋತಿ ಬಂತೆಜೀ ಸಾನಿಧ್ಯದಲ್ಲಿ ಬೌದ್ಧ ಧಮ್ಮ ದೀಕ್ಷೆ ನೀಡಲಾಯಿತು. ಇಂದು ಡಾ.ಬಿ ಆರ್‌ ಅಂಬೇಡ್ಕರ್‌ ಅವರು ಬೌದ್ಧ ಧರ್ಮ ಸ್ವೀಕರಿಸಿದ ದಿನವಾಗಿದೆ. ಜಗತ್ತಿಗೆ ಶಾಂತಿ, ಕರುಣೆ, ಪ್ರೀತಿಯನ್ನು ನೀಡಿದ ಭಗವಾನ್ ಗೌತಮ ಬುದ್ಧ. ಗೌತಮ ಬುದ್ಧ ಈಡೀ ಜಗತ್ತು ಜ್ಞಾನದಿಂದ ತುಂಬಬೇಕು ಎಂದು ಸಾರಿದವರು. ಇದನ್ನು ಸಾಕಾರಗೊಳಿಸಲು ಬೌದ್ಧ ಧರ್ಮವನ್ನು ಸ್ಥಾಪನೆ ಮಾಡಿದನು.  ಅದೇ ದಿನ ಬೌದ್ಧ ಧರ್ಮ ಸೇರಿಸುವ ಕೆಲಸ ಮಾಡಿದ್ದಾರೆ.ಹಿಂದು ಧರ್ಮದಲ್ಲಿ ಕೀಳಾಗಿ ಕಾಣುತ್ತಿರುವ ಹಿನ್ನಲೆ ದೀಕ್ಷೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ತ್ರಿಸರಣ ಪಂಚಶೀಲ, ಅಷ್ಟಾಂಗ ಮಾರ್ಗ ಮತ್ತು ಅಂಬೇಡ್ಕರ್ ಪ್ರತಿಪಾಧಿಸಿದ 22 ಪ್ರತಿಜ್ಞಾ ವಿಧಿಗಳನ್ನ ಬೋಧಿಸಲಾಯಿತು. ಪ್ರತಿಜ್ಞಾ ವಿಧಿ ಪಡೆದು ಹಿಂದೂ ಧರ್ಮಕ್ಕೆ ವಿದಾಯ ಹೇಳಿ ಬೌದ್ಧ ಧರ್ಮ ಸ್ವೀಕರಿಸಿದರು.

ಕಳೆದ ವಾರ ದೆಹಲಿಯಲ್ಲಿ 10 ಸಾವಿರ ಜನರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror