Advertisement
ಸುದ್ದಿಗಳು

ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಿದ ನೂರಾರು ಮಂದಿ | ಯಾದಗಿರಿಯಲ್ಲಿ ನಡೆದ ಕಾರ್ಯಕ್ರಮ |

Share

ಹಿಂದೂ ಧರ್ಮವನ್ನು ತ್ಯಜಿಸಿ ನೂರಾರು ಜನರು ಬೌದ್ಧ ಧರ್ಮವನ್ನು ಸ್ವೀಕರಿಸಿದ ಘಟನೆ ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ. ಸುಮಾರು 350 ಕ್ಕೂ ಅಧಿಕ ದಲಿತ ಸಮುದಾಯದ ಮಂದಿ ಬೌದ್ಧ ಧರ್ಮ ಸ್ವೀಕರಿಸಿದರು.ಬಿ.ಆರ್.ಅಂಬೇಡ್ಕರ್ ಮೊಮ್ಮಗಳಾದ ರಮಾಬಾಯಿ ನೇತೃತ್ವದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಕಾರ್ಯಕ್ರಮ ನಡೆಯಿತು. 

ನೂರಾರು ಜನರಿಗೆ ವರಜ್ಯೋತಿ ಬಂತೆಜೀ ಸಾನಿಧ್ಯದಲ್ಲಿ ಬೌದ್ಧ ಧಮ್ಮ ದೀಕ್ಷೆ ನೀಡಲಾಯಿತು. ಇಂದು ಡಾ.ಬಿ ಆರ್‌ ಅಂಬೇಡ್ಕರ್‌ ಅವರು ಬೌದ್ಧ ಧರ್ಮ ಸ್ವೀಕರಿಸಿದ ದಿನವಾಗಿದೆ. ಜಗತ್ತಿಗೆ ಶಾಂತಿ, ಕರುಣೆ, ಪ್ರೀತಿಯನ್ನು ನೀಡಿದ ಭಗವಾನ್ ಗೌತಮ ಬುದ್ಧ. ಗೌತಮ ಬುದ್ಧ ಈಡೀ ಜಗತ್ತು ಜ್ಞಾನದಿಂದ ತುಂಬಬೇಕು ಎಂದು ಸಾರಿದವರು. ಇದನ್ನು ಸಾಕಾರಗೊಳಿಸಲು ಬೌದ್ಧ ಧರ್ಮವನ್ನು ಸ್ಥಾಪನೆ ಮಾಡಿದನು.  ಅದೇ ದಿನ ಬೌದ್ಧ ಧರ್ಮ ಸೇರಿಸುವ ಕೆಲಸ ಮಾಡಿದ್ದಾರೆ.ಹಿಂದು ಧರ್ಮದಲ್ಲಿ ಕೀಳಾಗಿ ಕಾಣುತ್ತಿರುವ ಹಿನ್ನಲೆ ದೀಕ್ಷೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ತ್ರಿಸರಣ ಪಂಚಶೀಲ, ಅಷ್ಟಾಂಗ ಮಾರ್ಗ ಮತ್ತು ಅಂಬೇಡ್ಕರ್ ಪ್ರತಿಪಾಧಿಸಿದ 22 ಪ್ರತಿಜ್ಞಾ ವಿಧಿಗಳನ್ನ ಬೋಧಿಸಲಾಯಿತು. ಪ್ರತಿಜ್ಞಾ ವಿಧಿ ಪಡೆದು ಹಿಂದೂ ಧರ್ಮಕ್ಕೆ ವಿದಾಯ ಹೇಳಿ ಬೌದ್ಧ ಧರ್ಮ ಸ್ವೀಕರಿಸಿದರು.

ಕಳೆದ ವಾರ ದೆಹಲಿಯಲ್ಲಿ 10 ಸಾವಿರ ಜನರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 hour ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

9 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

10 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

20 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago