ಹಿಂದೂ ಧರ್ಮವನ್ನು ತ್ಯಜಿಸಿ ನೂರಾರು ಜನರು ಬೌದ್ಧ ಧರ್ಮವನ್ನು ಸ್ವೀಕರಿಸಿದ ಘಟನೆ ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ. ಸುಮಾರು 350 ಕ್ಕೂ ಅಧಿಕ ದಲಿತ ಸಮುದಾಯದ ಮಂದಿ ಬೌದ್ಧ ಧರ್ಮ ಸ್ವೀಕರಿಸಿದರು.ಬಿ.ಆರ್.ಅಂಬೇಡ್ಕರ್ ಮೊಮ್ಮಗಳಾದ ರಮಾಬಾಯಿ ನೇತೃತ್ವದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಕಾರ್ಯಕ್ರಮ ನಡೆಯಿತು.
ನೂರಾರು ಜನರಿಗೆ ವರಜ್ಯೋತಿ ಬಂತೆಜೀ ಸಾನಿಧ್ಯದಲ್ಲಿ ಬೌದ್ಧ ಧಮ್ಮ ದೀಕ್ಷೆ ನೀಡಲಾಯಿತು. ಇಂದು ಡಾ.ಬಿ ಆರ್ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ ದಿನವಾಗಿದೆ. ಜಗತ್ತಿಗೆ ಶಾಂತಿ, ಕರುಣೆ, ಪ್ರೀತಿಯನ್ನು ನೀಡಿದ ಭಗವಾನ್ ಗೌತಮ ಬುದ್ಧ. ಗೌತಮ ಬುದ್ಧ ಈಡೀ ಜಗತ್ತು ಜ್ಞಾನದಿಂದ ತುಂಬಬೇಕು ಎಂದು ಸಾರಿದವರು. ಇದನ್ನು ಸಾಕಾರಗೊಳಿಸಲು ಬೌದ್ಧ ಧರ್ಮವನ್ನು ಸ್ಥಾಪನೆ ಮಾಡಿದನು. ಅದೇ ದಿನ ಬೌದ್ಧ ಧರ್ಮ ಸೇರಿಸುವ ಕೆಲಸ ಮಾಡಿದ್ದಾರೆ.ಹಿಂದು ಧರ್ಮದಲ್ಲಿ ಕೀಳಾಗಿ ಕಾಣುತ್ತಿರುವ ಹಿನ್ನಲೆ ದೀಕ್ಷೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ತ್ರಿಸರಣ ಪಂಚಶೀಲ, ಅಷ್ಟಾಂಗ ಮಾರ್ಗ ಮತ್ತು ಅಂಬೇಡ್ಕರ್ ಪ್ರತಿಪಾಧಿಸಿದ 22 ಪ್ರತಿಜ್ಞಾ ವಿಧಿಗಳನ್ನ ಬೋಧಿಸಲಾಯಿತು. ಪ್ರತಿಜ್ಞಾ ವಿಧಿ ಪಡೆದು ಹಿಂದೂ ಧರ್ಮಕ್ಕೆ ವಿದಾಯ ಹೇಳಿ ಬೌದ್ಧ ಧರ್ಮ ಸ್ವೀಕರಿಸಿದರು.
ಕಳೆದ ವಾರ ದೆಹಲಿಯಲ್ಲಿ 10 ಸಾವಿರ ಜನರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು.
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…