Advertisement
MIRROR FOCUS

ಪಂಜದಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ |

Share

ದಕ್ಷಿಣ ಕನ್ನಡ ಜಿಲ್ಲೆಯ ಪಂಜದಲ್ಲಿ ಇರುವ ಏಕೈಕ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಉಪವಾಸ ಸತ್ಯಾಗ್ರಹ ನಡೆಯಿತು.ಪಂಜದ  ಗಾಂಧಿ ವಿದ್ಯಾಪೀಠದ ವತಿಯಿಂದ ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಈ ಸಂದರ್ಭ ಗಾಂಧಿ ವಿದ್ಯಾಪೀಠದ ಅಧ್ಯಕ್ಷ ಪುರುಷೋತ್ತಮ ಮೂಡೂರು  ಮಾತನಾಡಿ  ಪಂಜದಲ್ಲಿ ಸರ್ಕಾರಿ ಆಸ್ಪತ್ರೆ 24 ಗಂಟೆಗಳ ಸೇವೆ ಒದಗಿಸುವಂತಾಗಬೇಕು. ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಲು ಪಂಜದಂತಹ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಬೇಕಿದೆ ಎಂದು ಹೇಳಿದರು. ಪಂಜ ನಾಡಕಚೇರಿ ವ್ಯಾಪ್ತಿಯಲ್ಲಿ ಸುಮಾರು 21 ಗ್ರಾಮಗಳ ಜನರು ಚಿಕಿತ್ಸೆ ಪಡೆಯಲು ಇದೇ ಆಸ್ಪತ್ರೆಯನ್ನು ಆವಲಂಬಿಸಿರುತ್ತಾರೆ.

ಹೀಗಾಗಿ ಸರ್ಕಾರದಿಂದ ಮೂರು ಎಕರೆಯಷ್ಟು ಜಾಗವನ್ನು ಆಸ್ಪತ್ರೆ ಅಭಿವೃದ್ಧಿಗೆ ಮೀಸಲಾಗಿ ಇಟ್ಟಿರುವರು ಅಲ್ಲದೆ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನೂತನ ಆಸ್ಪತ್ರೆಯನ್ನು ಕೂಡ ನಿರ್ಮಿಸಿ ಅದರಲ್ಲಿ 12 ಬೆಡ್ ಗಳನ್ನು ಹಾಕುವ ವ್ಯವಸ್ಥೆ ಕೂಡ ಇದೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಉಳಿದ ಇಲಾಖೆಗಳಿಗೆ ಮನವಿ ಸಲ್ಲಿಸಿದರು ಇಲ್ಲಿಯವರೆಗೆ ಏನು ಪ್ರಯೋಜನ ಆಗಿಲ್ಲ. ಆದುದರಿಂದ ಸರ್ಕಾರ ಕೂಡಲೇ ಇತ್ತ ಕಡೆ ಗಮನಹರಿಸಿ  ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿದ್ಯಾ ಪೀಠದ ಸಂಚಾಲಕ ಜಿನ್ನಪ್ಪ ಗೌಡ ಅಳ್ಪೆ, ಪಶುವೈದ್ಯ  ದೇವಿ ಪ್ರಸಾದ್ ಕಾನತ್ತೂರು, ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್‌ ಕುಮಾರ್‌ ಕರಿಕಳ, ಸಾಮಾಜಿಕ ಮುಖಂಡ ಲಕ್ಷ್ಮೀಶ ಗಬ್ಲಡ್ಕ , ಲಕ್ಷ್ಮಣ ಬೊಳ್ಳಾಜೆ ಮೊದಲಾದವರು ಭೇಟಿ ನೀಡಿ ಬೆಂಬಲ ಸೂಚಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

2 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

5 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

9 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

10 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

21 hours ago