ದಕ್ಷಿಣ ಕನ್ನಡ ಜಿಲ್ಲೆಯ ಪಂಜದಲ್ಲಿ ಇರುವ ಏಕೈಕ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಉಪವಾಸ ಸತ್ಯಾಗ್ರಹ ನಡೆಯಿತು.ಪಂಜದ ಗಾಂಧಿ ವಿದ್ಯಾಪೀಠದ ವತಿಯಿಂದ ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಈ ಸಂದರ್ಭ ಗಾಂಧಿ ವಿದ್ಯಾಪೀಠದ ಅಧ್ಯಕ್ಷ ಪುರುಷೋತ್ತಮ ಮೂಡೂರು ಮಾತನಾಡಿ ಪಂಜದಲ್ಲಿ ಸರ್ಕಾರಿ ಆಸ್ಪತ್ರೆ 24 ಗಂಟೆಗಳ ಸೇವೆ ಒದಗಿಸುವಂತಾಗಬೇಕು. ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಲು ಪಂಜದಂತಹ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಬೇಕಿದೆ ಎಂದು ಹೇಳಿದರು. ಪಂಜ ನಾಡಕಚೇರಿ ವ್ಯಾಪ್ತಿಯಲ್ಲಿ ಸುಮಾರು 21 ಗ್ರಾಮಗಳ ಜನರು ಚಿಕಿತ್ಸೆ ಪಡೆಯಲು ಇದೇ ಆಸ್ಪತ್ರೆಯನ್ನು ಆವಲಂಬಿಸಿರುತ್ತಾರೆ.
ಹೀಗಾಗಿ ಸರ್ಕಾರದಿಂದ ಮೂರು ಎಕರೆಯಷ್ಟು ಜಾಗವನ್ನು ಆಸ್ಪತ್ರೆ ಅಭಿವೃದ್ಧಿಗೆ ಮೀಸಲಾಗಿ ಇಟ್ಟಿರುವರು ಅಲ್ಲದೆ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನೂತನ ಆಸ್ಪತ್ರೆಯನ್ನು ಕೂಡ ನಿರ್ಮಿಸಿ ಅದರಲ್ಲಿ 12 ಬೆಡ್ ಗಳನ್ನು ಹಾಕುವ ವ್ಯವಸ್ಥೆ ಕೂಡ ಇದೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಉಳಿದ ಇಲಾಖೆಗಳಿಗೆ ಮನವಿ ಸಲ್ಲಿಸಿದರು ಇಲ್ಲಿಯವರೆಗೆ ಏನು ಪ್ರಯೋಜನ ಆಗಿಲ್ಲ. ಆದುದರಿಂದ ಸರ್ಕಾರ ಕೂಡಲೇ ಇತ್ತ ಕಡೆ ಗಮನಹರಿಸಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿದ್ಯಾ ಪೀಠದ ಸಂಚಾಲಕ ಜಿನ್ನಪ್ಪ ಗೌಡ ಅಳ್ಪೆ, ಪಶುವೈದ್ಯ ದೇವಿ ಪ್ರಸಾದ್ ಕಾನತ್ತೂರು, ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ, ಸಾಮಾಜಿಕ ಮುಖಂಡ ಲಕ್ಷ್ಮೀಶ ಗಬ್ಲಡ್ಕ , ಲಕ್ಷ್ಮಣ ಬೊಳ್ಳಾಜೆ ಮೊದಲಾದವರು ಭೇಟಿ ನೀಡಿ ಬೆಂಬಲ ಸೂಚಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…