Advertisement
MIRROR FOCUS

ಪಂಜದಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ |

Share

ದಕ್ಷಿಣ ಕನ್ನಡ ಜಿಲ್ಲೆಯ ಪಂಜದಲ್ಲಿ ಇರುವ ಏಕೈಕ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಉಪವಾಸ ಸತ್ಯಾಗ್ರಹ ನಡೆಯಿತು.ಪಂಜದ  ಗಾಂಧಿ ವಿದ್ಯಾಪೀಠದ ವತಿಯಿಂದ ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಈ ಸಂದರ್ಭ ಗಾಂಧಿ ವಿದ್ಯಾಪೀಠದ ಅಧ್ಯಕ್ಷ ಪುರುಷೋತ್ತಮ ಮೂಡೂರು  ಮಾತನಾಡಿ  ಪಂಜದಲ್ಲಿ ಸರ್ಕಾರಿ ಆಸ್ಪತ್ರೆ 24 ಗಂಟೆಗಳ ಸೇವೆ ಒದಗಿಸುವಂತಾಗಬೇಕು. ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಲು ಪಂಜದಂತಹ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಬೇಕಿದೆ ಎಂದು ಹೇಳಿದರು. ಪಂಜ ನಾಡಕಚೇರಿ ವ್ಯಾಪ್ತಿಯಲ್ಲಿ ಸುಮಾರು 21 ಗ್ರಾಮಗಳ ಜನರು ಚಿಕಿತ್ಸೆ ಪಡೆಯಲು ಇದೇ ಆಸ್ಪತ್ರೆಯನ್ನು ಆವಲಂಬಿಸಿರುತ್ತಾರೆ.

ಹೀಗಾಗಿ ಸರ್ಕಾರದಿಂದ ಮೂರು ಎಕರೆಯಷ್ಟು ಜಾಗವನ್ನು ಆಸ್ಪತ್ರೆ ಅಭಿವೃದ್ಧಿಗೆ ಮೀಸಲಾಗಿ ಇಟ್ಟಿರುವರು ಅಲ್ಲದೆ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನೂತನ ಆಸ್ಪತ್ರೆಯನ್ನು ಕೂಡ ನಿರ್ಮಿಸಿ ಅದರಲ್ಲಿ 12 ಬೆಡ್ ಗಳನ್ನು ಹಾಕುವ ವ್ಯವಸ್ಥೆ ಕೂಡ ಇದೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಉಳಿದ ಇಲಾಖೆಗಳಿಗೆ ಮನವಿ ಸಲ್ಲಿಸಿದರು ಇಲ್ಲಿಯವರೆಗೆ ಏನು ಪ್ರಯೋಜನ ಆಗಿಲ್ಲ. ಆದುದರಿಂದ ಸರ್ಕಾರ ಕೂಡಲೇ ಇತ್ತ ಕಡೆ ಗಮನಹರಿಸಿ  ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿದ್ಯಾ ಪೀಠದ ಸಂಚಾಲಕ ಜಿನ್ನಪ್ಪ ಗೌಡ ಅಳ್ಪೆ, ಪಶುವೈದ್ಯ  ದೇವಿ ಪ್ರಸಾದ್ ಕಾನತ್ತೂರು, ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್‌ ಕುಮಾರ್‌ ಕರಿಕಳ, ಸಾಮಾಜಿಕ ಮುಖಂಡ ಲಕ್ಷ್ಮೀಶ ಗಬ್ಲಡ್ಕ , ಲಕ್ಷ್ಮಣ ಬೊಳ್ಳಾಜೆ ಮೊದಲಾದವರು ಭೇಟಿ ನೀಡಿ ಬೆಂಬಲ ಸೂಚಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

3 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

14 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

18 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago