ಸಮಾನತೆಯ ಪ್ರತಿಮೆ | ಹೈದರಾಬಾದ್‌ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿರುವ ಪ್ರಧಾನಿ ಮೋದಿ

January 23, 2022
12:03 PM

ಪ್ರಧಾನಿ ನರೇಂದ್ರ ಮೋದಿ ಅವರು ಹೈದರಬಾದ್‌ನಲ್ಲಿ 11 ನೇ ಶತಮಾನದ ಸಂತ ಮತ್ತು ಸಮಾಜ ಸುಧಾಕರ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಫೆಬ್ರವರಿ 5 ರಂದು ಅನಾವರಣಗೊಳಿಸಲಿದ್ದಾರೆ. ಸಮಾನತೆಯ ಪ್ರತಿಮೆ ಎಂದು ಬಣ್ಣಿಸಲಾದ ಈ ಪ್ರತಿಮೆಯನ್ನು ಶಂಶಾಬಾದ್‌ನಲ್ಲಿ 45 ಎಕರೆ ಸಂಕೀರ್ಣದಲ್ಲಿ ಸ್ಥಾಪಿಸಲಾಗಿದೆ.

ಹೊರಾಂಗಣ 216 ಅಡಿ ಪ್ರತಿಮೆಯು ಕುಳಿತುಕೊಳ್ಳುವ ಭಂಗಿಯಲ್ಲಿ ಎತ್ತರದ ಪ್ರತಿಮೆಗಳಲ್ಲಿ ಒಂದಾಗಿದ್ದು, ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವು ಐದು ಲೋಹಗಳ ಮಿಶ್ರಣವಾದ ಪಂಚಲೋಹದಿಂದ ಪ್ರತಿಮೆಯನ್ನು ಮಾಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಖ್ಯಾತ ಆಧ್ಯಾತ್ಮಕ ಗುರು ಚಿನ್ನ ಜೀಯರ್ ಸ್ವಾಮಿ ಅವರೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇನ್ನು ಹಲವಾರು ಮುಖ್ಯಮಂತ್ರಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ನಟರು ಕೂಡ ಸಮಾರಂಭದಲ್ಲಿ ಪಾಲ್ಗೋಳ್ಳಲಿದ್ದಾರೆ.

ಫೆಬ್ರವರಿ 13 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಮಾನುಜರ ಪ್ರತಿಮೆಯ ಒಳ ಕೋಣೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror