ಪ್ರಧಾನಿ ನರೇಂದ್ರ ಮೋದಿ ಅವರು ಹೈದರಬಾದ್ನಲ್ಲಿ 11 ನೇ ಶತಮಾನದ ಸಂತ ಮತ್ತು ಸಮಾಜ ಸುಧಾಕರ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಫೆಬ್ರವರಿ 5 ರಂದು ಅನಾವರಣಗೊಳಿಸಲಿದ್ದಾರೆ. ಸಮಾನತೆಯ ಪ್ರತಿಮೆ ಎಂದು ಬಣ್ಣಿಸಲಾದ ಈ ಪ್ರತಿಮೆಯನ್ನು ಶಂಶಾಬಾದ್ನಲ್ಲಿ 45 ಎಕರೆ ಸಂಕೀರ್ಣದಲ್ಲಿ ಸ್ಥಾಪಿಸಲಾಗಿದೆ.
ಹೊರಾಂಗಣ 216 ಅಡಿ ಪ್ರತಿಮೆಯು ಕುಳಿತುಕೊಳ್ಳುವ ಭಂಗಿಯಲ್ಲಿ ಎತ್ತರದ ಪ್ರತಿಮೆಗಳಲ್ಲಿ ಒಂದಾಗಿದ್ದು, ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವು ಐದು ಲೋಹಗಳ ಮಿಶ್ರಣವಾದ ಪಂಚಲೋಹದಿಂದ ಪ್ರತಿಮೆಯನ್ನು ಮಾಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಖ್ಯಾತ ಆಧ್ಯಾತ್ಮಕ ಗುರು ಚಿನ್ನ ಜೀಯರ್ ಸ್ವಾಮಿ ಅವರೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇನ್ನು ಹಲವಾರು ಮುಖ್ಯಮಂತ್ರಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ನಟರು ಕೂಡ ಸಮಾರಂಭದಲ್ಲಿ ಪಾಲ್ಗೋಳ್ಳಲಿದ್ದಾರೆ.
ಫೆಬ್ರವರಿ 13 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಮಾನುಜರ ಪ್ರತಿಮೆಯ ಒಳ ಕೋಣೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…