Advertisement
ಸುದ್ದಿಗಳು

ಸಮಾನತೆಯ ಪ್ರತಿಮೆ | ಹೈದರಾಬಾದ್‌ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿರುವ ಪ್ರಧಾನಿ ಮೋದಿ

Share

ಪ್ರಧಾನಿ ನರೇಂದ್ರ ಮೋದಿ ಅವರು ಹೈದರಬಾದ್‌ನಲ್ಲಿ 11 ನೇ ಶತಮಾನದ ಸಂತ ಮತ್ತು ಸಮಾಜ ಸುಧಾಕರ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಫೆಬ್ರವರಿ 5 ರಂದು ಅನಾವರಣಗೊಳಿಸಲಿದ್ದಾರೆ. ಸಮಾನತೆಯ ಪ್ರತಿಮೆ ಎಂದು ಬಣ್ಣಿಸಲಾದ ಈ ಪ್ರತಿಮೆಯನ್ನು ಶಂಶಾಬಾದ್‌ನಲ್ಲಿ 45 ಎಕರೆ ಸಂಕೀರ್ಣದಲ್ಲಿ ಸ್ಥಾಪಿಸಲಾಗಿದೆ.

ಹೊರಾಂಗಣ 216 ಅಡಿ ಪ್ರತಿಮೆಯು ಕುಳಿತುಕೊಳ್ಳುವ ಭಂಗಿಯಲ್ಲಿ ಎತ್ತರದ ಪ್ರತಿಮೆಗಳಲ್ಲಿ ಒಂದಾಗಿದ್ದು, ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವು ಐದು ಲೋಹಗಳ ಮಿಶ್ರಣವಾದ ಪಂಚಲೋಹದಿಂದ ಪ್ರತಿಮೆಯನ್ನು ಮಾಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಖ್ಯಾತ ಆಧ್ಯಾತ್ಮಕ ಗುರು ಚಿನ್ನ ಜೀಯರ್ ಸ್ವಾಮಿ ಅವರೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇನ್ನು ಹಲವಾರು ಮುಖ್ಯಮಂತ್ರಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ನಟರು ಕೂಡ ಸಮಾರಂಭದಲ್ಲಿ ಪಾಲ್ಗೋಳ್ಳಲಿದ್ದಾರೆ.

ಫೆಬ್ರವರಿ 13 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಮಾನುಜರ ಪ್ರತಿಮೆಯ ಒಳ ಕೋಣೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

22 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago