#ನಾನುಕೃಷಿಕ | ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ | ಕೃಷಿಗೆ ಇಳಿದ ಯುವಕ ಶ್ರೀನಂದನ ಮಾತು |

January 1, 2023
7:00 AM
ಯುವ ಕೃಷಿಕರನ್ನು ಪರಿಚಯಿಸುವ ಹಾಗೂ ಪ್ರೋತ್ಸಾಹಿಸುವ ಕೆಲಸವನ್ನು ದಿ ರೂರಲ್‌ ಮಿರರ್ ಆರಂಭಿಸಿದೆ. ಕೃಷಿ ಕೂಡಾ ಒಂದು ಹೆಮ್ಮೆಯ ಉದ್ಯೋಗ. ನೆಮ್ಮದಿ ಕೊಡುವ ಈ ಉದ್ಯೋಗ ಮಾಡುವ ಯುವ ಕೃಷಿಕರು ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವಂತಾಗಬೇಕು. ಯುವಕೃಷಿಕರು ನಿಮ್ಮ ಆಸುಪಾಸಿನಲ್ಲಿದ್ದರೆ ನಮಗೆ ಮಾಹಿತಿ ನೀಡಿ, ನಾನುಕೃಷಿಕ ಎಂದು ಹೆಮ್ಮೆಯಿಂದ ಹೇಳುವ ಅಭಿಯಾನ ಆರಂಭಿಸೋಣ

“ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ. ಹಿರಿಯರು ಮನೆಯಲ್ಲಿ ಮಾರ್ಗದರ್ಶನ ಮಾಡುವಾಗಲೇ ಕೃಷಿಯಲ್ಲಿ ಇದ್ದು ಬಿಡಿ…” ಹೀಗೆಂದು ಸಲಹೆ ನೀಡುವವರು ಯುವ ಕೃಷಿಕ ಶ್ರೀನಂದನ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಣ್ಮೂರಿನ ಶ್ರೀನಂದನ ಅವರು ಈಗ ಯುವ ಕೃಷಿಕ. ಎಣ್ಮೂರಿನ ಪ್ರಸನ್ನ ಕುಂಞಹಿತ್ಲುಹಾಗೂ ಭಾಗ್ಯ  ಅವರ ಪುತ್ರನಾಗಿರುವ ಶ್ರೀನಂದನ ಅವರು ಪದವಿಯ ಬಳಿಕ ಉದ್ಯೋಗಕ್ಕಾಗಿ ಬೆಂಗಳೂರು ಬಸ್ಸು ಹತ್ತಿದವರು. ಕೃಷಿಯಲ್ಲಿಯೇ ನೆಲೆಯೂರುವ ಉದ್ದೇಶ ಹೊಂದಿದ್ದ ಅವರು ಬೆಂಗಳೂರಿನ ಕೆಲಸಕ್ಕೆ ಗುಡ್‌ಬೈ ಹೇಳಿ ಕೃಷಿ ಕೆಲಸಕ್ಕೆ ಇಳಿದರು.

ತಂದೆ ಮಾಡಿರುವ ಕೃಷಿ ಕಾಯಕವನ್ನು ಮುಂದುವರಿಸುತ್ತಾ ಅಭಿವೃದ್ಧಿ ಪಡಿಸಿದ ಶ್ರೀನಂದನ್‌ ಅವರು ಕೃಷಿಗೆ ಬಂದ ವರ್ಷ ಕೊಳೆರೋಗದಿಂದ ಅಡಿಕೆ ವ್ಯಾಪಕವಾಗಿ ನಷ್ಟವಾಗಿತ್ತು. ಈ ಸಂದರ್ಭ ತಂದೆಯ ಬೆಂಬಲದ ಮಾತುಗಳಿಂದ ಧೈರ್ಯ ಬಂದಿತ್ತು ಎನ್ನುವ ಶ್ರೀನಂದನ, ಕೃಷಿಯಲ್ಲಿಎಳೆಯ ಪ್ರಾಯದಲ್ಲಿ ಅಂದರೆ ಬಹುಬೇಗನೆ ತೊಡಗಿಸಿಕೊಂಡಾಗ ಕೃಷಿ ಸವಾಲುಗಳು ತಿಳಿದು ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎನ್ನುತ್ತಾರೆ.

ಒಂದು ಸಮಯದಲ್ಲಿ ತೋಟದ ಕಾಳುಮೆಣಸು ಕೊಯ್ಯಲು ಜನ ಸಿಗದೇ ಇದ್ದಾಗ ನಾನೇ ಸ್ವತ: ಆರಂಭಿಸಿದೆ, ಈಗ ಅಭ್ಯಾಸವಾಗಿದೆ ಎನ್ನುತ್ತಾರೆ ಶ್ರೀನಂದನ.

ಮನೆಯಲ್ಲೂ ಮನೆಯಾಕೆಗೂ ಕೃಷಿ, ಹಳ್ಳಿ ಪ್ರದೇಶ ಇಷ್ಟವಾದ ಕಾರಣ ಕೃಷಿ ಬದುಕು ಸಂತೃಪ್ತವಾಗಿದೆ, ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಹೇಳುತ್ತಾರೆ.

ನಿಮ್ಮ ಆಸುಪಾಸಿನ ಯುವಕೃಷಿಕರ ಬಗ್ಗೆ ನಮಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿ. ವಾಟ್ಸಪ್‌ ಸಂಖ್ಯೆ 9449125447
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ
May 20, 2026
7:18 AM
by: ಮಿರರ್‌ ಡೆಸ್ಕ್
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror