Advertisement
ಅನುಕ್ರಮ

#ನಾನುಕೃಷಿಕ | ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ | ಕೃಷಿಗೆ ಇಳಿದ ಯುವಕ ಶ್ರೀನಂದನ ಮಾತು |

Share
ಯುವ ಕೃಷಿಕರನ್ನು ಪರಿಚಯಿಸುವ ಹಾಗೂ ಪ್ರೋತ್ಸಾಹಿಸುವ ಕೆಲಸವನ್ನು ದಿ ರೂರಲ್‌ ಮಿರರ್ ಆರಂಭಿಸಿದೆ. ಕೃಷಿ ಕೂಡಾ ಒಂದು ಹೆಮ್ಮೆಯ ಉದ್ಯೋಗ. ನೆಮ್ಮದಿ ಕೊಡುವ ಈ ಉದ್ಯೋಗ ಮಾಡುವ ಯುವ ಕೃಷಿಕರು ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವಂತಾಗಬೇಕು. ಯುವಕೃಷಿಕರು ನಿಮ್ಮ ಆಸುಪಾಸಿನಲ್ಲಿದ್ದರೆ ನಮಗೆ ಮಾಹಿತಿ ನೀಡಿ, ನಾನುಕೃಷಿಕ ಎಂದು ಹೆಮ್ಮೆಯಿಂದ ಹೇಳುವ ಅಭಿಯಾನ ಆರಂಭಿಸೋಣ

“ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ. ಹಿರಿಯರು ಮನೆಯಲ್ಲಿ ಮಾರ್ಗದರ್ಶನ ಮಾಡುವಾಗಲೇ ಕೃಷಿಯಲ್ಲಿ ಇದ್ದು ಬಿಡಿ…” ಹೀಗೆಂದು ಸಲಹೆ ನೀಡುವವರು ಯುವ ಕೃಷಿಕ ಶ್ರೀನಂದನ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಣ್ಮೂರಿನ ಶ್ರೀನಂದನ ಅವರು ಈಗ ಯುವ ಕೃಷಿಕ. ಎಣ್ಮೂರಿನ ಪ್ರಸನ್ನ ಕುಂಞಹಿತ್ಲುಹಾಗೂ ಭಾಗ್ಯ  ಅವರ ಪುತ್ರನಾಗಿರುವ ಶ್ರೀನಂದನ ಅವರು ಪದವಿಯ ಬಳಿಕ ಉದ್ಯೋಗಕ್ಕಾಗಿ ಬೆಂಗಳೂರು ಬಸ್ಸು ಹತ್ತಿದವರು. ಕೃಷಿಯಲ್ಲಿಯೇ ನೆಲೆಯೂರುವ ಉದ್ದೇಶ ಹೊಂದಿದ್ದ ಅವರು ಬೆಂಗಳೂರಿನ ಕೆಲಸಕ್ಕೆ ಗುಡ್‌ಬೈ ಹೇಳಿ ಕೃಷಿ ಕೆಲಸಕ್ಕೆ ಇಳಿದರು.

ತಂದೆ ಮಾಡಿರುವ ಕೃಷಿ ಕಾಯಕವನ್ನು ಮುಂದುವರಿಸುತ್ತಾ ಅಭಿವೃದ್ಧಿ ಪಡಿಸಿದ ಶ್ರೀನಂದನ್‌ ಅವರು ಕೃಷಿಗೆ ಬಂದ ವರ್ಷ ಕೊಳೆರೋಗದಿಂದ ಅಡಿಕೆ ವ್ಯಾಪಕವಾಗಿ ನಷ್ಟವಾಗಿತ್ತು. ಈ ಸಂದರ್ಭ ತಂದೆಯ ಬೆಂಬಲದ ಮಾತುಗಳಿಂದ ಧೈರ್ಯ ಬಂದಿತ್ತು ಎನ್ನುವ ಶ್ರೀನಂದನ, ಕೃಷಿಯಲ್ಲಿಎಳೆಯ ಪ್ರಾಯದಲ್ಲಿ ಅಂದರೆ ಬಹುಬೇಗನೆ ತೊಡಗಿಸಿಕೊಂಡಾಗ ಕೃಷಿ ಸವಾಲುಗಳು ತಿಳಿದು ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎನ್ನುತ್ತಾರೆ.

ಒಂದು ಸಮಯದಲ್ಲಿ ತೋಟದ ಕಾಳುಮೆಣಸು ಕೊಯ್ಯಲು ಜನ ಸಿಗದೇ ಇದ್ದಾಗ ನಾನೇ ಸ್ವತ: ಆರಂಭಿಸಿದೆ, ಈಗ ಅಭ್ಯಾಸವಾಗಿದೆ ಎನ್ನುತ್ತಾರೆ ಶ್ರೀನಂದನ.

ಮನೆಯಲ್ಲೂ ಮನೆಯಾಕೆಗೂ ಕೃಷಿ, ಹಳ್ಳಿ ಪ್ರದೇಶ ಇಷ್ಟವಾದ ಕಾರಣ ಕೃಷಿ ಬದುಕು ಸಂತೃಪ್ತವಾಗಿದೆ, ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಹೇಳುತ್ತಾರೆ.

ನಿಮ್ಮ ಆಸುಪಾಸಿನ ಯುವಕೃಷಿಕರ ಬಗ್ಗೆ ನಮಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿ. ವಾಟ್ಸಪ್‌ ಸಂಖ್ಯೆ 9449125447
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

1 day ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

1 day ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

2 days ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 days ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago