“ನೀವು ಕೃಷಿಗೆ ಇಳಿಯುವ ಪ್ಲಾನ್ ಇದ್ದರೆ ಬೇಗನೆ ಇಳಿದು ಬಿಡಿ. ಹಿರಿಯರು ಮನೆಯಲ್ಲಿ ಮಾರ್ಗದರ್ಶನ ಮಾಡುವಾಗಲೇ ಕೃಷಿಯಲ್ಲಿ ಇದ್ದು ಬಿಡಿ…” ಹೀಗೆಂದು ಸಲಹೆ ನೀಡುವವರು ಯುವ ಕೃಷಿಕ ಶ್ರೀನಂದನ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಣ್ಮೂರಿನ ಶ್ರೀನಂದನ ಅವರು ಈಗ ಯುವ ಕೃಷಿಕ. ಎಣ್ಮೂರಿನ ಪ್ರಸನ್ನ ಕುಂಞಹಿತ್ಲುಹಾಗೂ ಭಾಗ್ಯ ಅವರ ಪುತ್ರನಾಗಿರುವ ಶ್ರೀನಂದನ ಅವರು ಪದವಿಯ ಬಳಿಕ ಉದ್ಯೋಗಕ್ಕಾಗಿ ಬೆಂಗಳೂರು ಬಸ್ಸು ಹತ್ತಿದವರು. ಕೃಷಿಯಲ್ಲಿಯೇ ನೆಲೆಯೂರುವ ಉದ್ದೇಶ ಹೊಂದಿದ್ದ ಅವರು ಬೆಂಗಳೂರಿನ ಕೆಲಸಕ್ಕೆ ಗುಡ್ಬೈ ಹೇಳಿ ಕೃಷಿ ಕೆಲಸಕ್ಕೆ ಇಳಿದರು.
ತಂದೆ ಮಾಡಿರುವ ಕೃಷಿ ಕಾಯಕವನ್ನು ಮುಂದುವರಿಸುತ್ತಾ ಅಭಿವೃದ್ಧಿ ಪಡಿಸಿದ ಶ್ರೀನಂದನ್ ಅವರು ಕೃಷಿಗೆ ಬಂದ ವರ್ಷ ಕೊಳೆರೋಗದಿಂದ ಅಡಿಕೆ ವ್ಯಾಪಕವಾಗಿ ನಷ್ಟವಾಗಿತ್ತು. ಈ ಸಂದರ್ಭ ತಂದೆಯ ಬೆಂಬಲದ ಮಾತುಗಳಿಂದ ಧೈರ್ಯ ಬಂದಿತ್ತು ಎನ್ನುವ ಶ್ರೀನಂದನ, ಕೃಷಿಯಲ್ಲಿಎಳೆಯ ಪ್ರಾಯದಲ್ಲಿ ಅಂದರೆ ಬಹುಬೇಗನೆ ತೊಡಗಿಸಿಕೊಂಡಾಗ ಕೃಷಿ ಸವಾಲುಗಳು ತಿಳಿದು ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎನ್ನುತ್ತಾರೆ.
ಒಂದು ಸಮಯದಲ್ಲಿ ತೋಟದ ಕಾಳುಮೆಣಸು ಕೊಯ್ಯಲು ಜನ ಸಿಗದೇ ಇದ್ದಾಗ ನಾನೇ ಸ್ವತ: ಆರಂಭಿಸಿದೆ, ಈಗ ಅಭ್ಯಾಸವಾಗಿದೆ ಎನ್ನುತ್ತಾರೆ ಶ್ರೀನಂದನ.
ಮನೆಯಲ್ಲೂ ಮನೆಯಾಕೆಗೂ ಕೃಷಿ, ಹಳ್ಳಿ ಪ್ರದೇಶ ಇಷ್ಟವಾದ ಕಾರಣ ಕೃಷಿ ಬದುಕು ಸಂತೃಪ್ತವಾಗಿದೆ, ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಹೇಳುತ್ತಾರೆ.
ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು…
ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ…
ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490