Advertisement
ಅನುಕ್ರಮ

#ನಾನುಕೃಷಿಕ | ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ | ಕೃಷಿಗೆ ಇಳಿದ ಯುವಕ ಶ್ರೀನಂದನ ಮಾತು |

Share
ಯುವ ಕೃಷಿಕರನ್ನು ಪರಿಚಯಿಸುವ ಹಾಗೂ ಪ್ರೋತ್ಸಾಹಿಸುವ ಕೆಲಸವನ್ನು ದಿ ರೂರಲ್‌ ಮಿರರ್ ಆರಂಭಿಸಿದೆ. ಕೃಷಿ ಕೂಡಾ ಒಂದು ಹೆಮ್ಮೆಯ ಉದ್ಯೋಗ. ನೆಮ್ಮದಿ ಕೊಡುವ ಈ ಉದ್ಯೋಗ ಮಾಡುವ ಯುವ ಕೃಷಿಕರು ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವಂತಾಗಬೇಕು. ಯುವಕೃಷಿಕರು ನಿಮ್ಮ ಆಸುಪಾಸಿನಲ್ಲಿದ್ದರೆ ನಮಗೆ ಮಾಹಿತಿ ನೀಡಿ, ನಾನುಕೃಷಿಕ ಎಂದು ಹೆಮ್ಮೆಯಿಂದ ಹೇಳುವ ಅಭಿಯಾನ ಆರಂಭಿಸೋಣ

“ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ. ಹಿರಿಯರು ಮನೆಯಲ್ಲಿ ಮಾರ್ಗದರ್ಶನ ಮಾಡುವಾಗಲೇ ಕೃಷಿಯಲ್ಲಿ ಇದ್ದು ಬಿಡಿ…” ಹೀಗೆಂದು ಸಲಹೆ ನೀಡುವವರು ಯುವ ಕೃಷಿಕ ಶ್ರೀನಂದನ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಣ್ಮೂರಿನ ಶ್ರೀನಂದನ ಅವರು ಈಗ ಯುವ ಕೃಷಿಕ. ಎಣ್ಮೂರಿನ ಪ್ರಸನ್ನ ಕುಂಞಹಿತ್ಲುಹಾಗೂ ಭಾಗ್ಯ  ಅವರ ಪುತ್ರನಾಗಿರುವ ಶ್ರೀನಂದನ ಅವರು ಪದವಿಯ ಬಳಿಕ ಉದ್ಯೋಗಕ್ಕಾಗಿ ಬೆಂಗಳೂರು ಬಸ್ಸು ಹತ್ತಿದವರು. ಕೃಷಿಯಲ್ಲಿಯೇ ನೆಲೆಯೂರುವ ಉದ್ದೇಶ ಹೊಂದಿದ್ದ ಅವರು ಬೆಂಗಳೂರಿನ ಕೆಲಸಕ್ಕೆ ಗುಡ್‌ಬೈ ಹೇಳಿ ಕೃಷಿ ಕೆಲಸಕ್ಕೆ ಇಳಿದರು.

ತಂದೆ ಮಾಡಿರುವ ಕೃಷಿ ಕಾಯಕವನ್ನು ಮುಂದುವರಿಸುತ್ತಾ ಅಭಿವೃದ್ಧಿ ಪಡಿಸಿದ ಶ್ರೀನಂದನ್‌ ಅವರು ಕೃಷಿಗೆ ಬಂದ ವರ್ಷ ಕೊಳೆರೋಗದಿಂದ ಅಡಿಕೆ ವ್ಯಾಪಕವಾಗಿ ನಷ್ಟವಾಗಿತ್ತು. ಈ ಸಂದರ್ಭ ತಂದೆಯ ಬೆಂಬಲದ ಮಾತುಗಳಿಂದ ಧೈರ್ಯ ಬಂದಿತ್ತು ಎನ್ನುವ ಶ್ರೀನಂದನ, ಕೃಷಿಯಲ್ಲಿಎಳೆಯ ಪ್ರಾಯದಲ್ಲಿ ಅಂದರೆ ಬಹುಬೇಗನೆ ತೊಡಗಿಸಿಕೊಂಡಾಗ ಕೃಷಿ ಸವಾಲುಗಳು ತಿಳಿದು ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎನ್ನುತ್ತಾರೆ.

ಒಂದು ಸಮಯದಲ್ಲಿ ತೋಟದ ಕಾಳುಮೆಣಸು ಕೊಯ್ಯಲು ಜನ ಸಿಗದೇ ಇದ್ದಾಗ ನಾನೇ ಸ್ವತ: ಆರಂಭಿಸಿದೆ, ಈಗ ಅಭ್ಯಾಸವಾಗಿದೆ ಎನ್ನುತ್ತಾರೆ ಶ್ರೀನಂದನ.

ಮನೆಯಲ್ಲೂ ಮನೆಯಾಕೆಗೂ ಕೃಷಿ, ಹಳ್ಳಿ ಪ್ರದೇಶ ಇಷ್ಟವಾದ ಕಾರಣ ಕೃಷಿ ಬದುಕು ಸಂತೃಪ್ತವಾಗಿದೆ, ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಹೇಳುತ್ತಾರೆ.

ನಿಮ್ಮ ಆಸುಪಾಸಿನ ಯುವಕೃಷಿಕರ ಬಗ್ಗೆ ನಮಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿ. ವಾಟ್ಸಪ್‌ ಸಂಖ್ಯೆ 9449125447
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

6 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

7 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

7 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

17 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

17 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

18 hours ago