“ನೀವು ಕೃಷಿಗೆ ಇಳಿಯುವ ಪ್ಲಾನ್ ಇದ್ದರೆ ಬೇಗನೆ ಇಳಿದು ಬಿಡಿ. ಹಿರಿಯರು ಮನೆಯಲ್ಲಿ ಮಾರ್ಗದರ್ಶನ ಮಾಡುವಾಗಲೇ ಕೃಷಿಯಲ್ಲಿ ಇದ್ದು ಬಿಡಿ…” ಹೀಗೆಂದು ಸಲಹೆ ನೀಡುವವರು ಯುವ ಕೃಷಿಕ ಶ್ರೀನಂದನ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಣ್ಮೂರಿನ ಶ್ರೀನಂದನ ಅವರು ಈಗ ಯುವ ಕೃಷಿಕ. ಎಣ್ಮೂರಿನ ಪ್ರಸನ್ನ ಕುಂಞಹಿತ್ಲುಹಾಗೂ ಭಾಗ್ಯ ಅವರ ಪುತ್ರನಾಗಿರುವ ಶ್ರೀನಂದನ ಅವರು ಪದವಿಯ ಬಳಿಕ ಉದ್ಯೋಗಕ್ಕಾಗಿ ಬೆಂಗಳೂರು ಬಸ್ಸು ಹತ್ತಿದವರು. ಕೃಷಿಯಲ್ಲಿಯೇ ನೆಲೆಯೂರುವ ಉದ್ದೇಶ ಹೊಂದಿದ್ದ ಅವರು ಬೆಂಗಳೂರಿನ ಕೆಲಸಕ್ಕೆ ಗುಡ್ಬೈ ಹೇಳಿ ಕೃಷಿ ಕೆಲಸಕ್ಕೆ ಇಳಿದರು.
ತಂದೆ ಮಾಡಿರುವ ಕೃಷಿ ಕಾಯಕವನ್ನು ಮುಂದುವರಿಸುತ್ತಾ ಅಭಿವೃದ್ಧಿ ಪಡಿಸಿದ ಶ್ರೀನಂದನ್ ಅವರು ಕೃಷಿಗೆ ಬಂದ ವರ್ಷ ಕೊಳೆರೋಗದಿಂದ ಅಡಿಕೆ ವ್ಯಾಪಕವಾಗಿ ನಷ್ಟವಾಗಿತ್ತು. ಈ ಸಂದರ್ಭ ತಂದೆಯ ಬೆಂಬಲದ ಮಾತುಗಳಿಂದ ಧೈರ್ಯ ಬಂದಿತ್ತು ಎನ್ನುವ ಶ್ರೀನಂದನ, ಕೃಷಿಯಲ್ಲಿಎಳೆಯ ಪ್ರಾಯದಲ್ಲಿ ಅಂದರೆ ಬಹುಬೇಗನೆ ತೊಡಗಿಸಿಕೊಂಡಾಗ ಕೃಷಿ ಸವಾಲುಗಳು ತಿಳಿದು ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎನ್ನುತ್ತಾರೆ.
ಒಂದು ಸಮಯದಲ್ಲಿ ತೋಟದ ಕಾಳುಮೆಣಸು ಕೊಯ್ಯಲು ಜನ ಸಿಗದೇ ಇದ್ದಾಗ ನಾನೇ ಸ್ವತ: ಆರಂಭಿಸಿದೆ, ಈಗ ಅಭ್ಯಾಸವಾಗಿದೆ ಎನ್ನುತ್ತಾರೆ ಶ್ರೀನಂದನ.
ಮನೆಯಲ್ಲೂ ಮನೆಯಾಕೆಗೂ ಕೃಷಿ, ಹಳ್ಳಿ ಪ್ರದೇಶ ಇಷ್ಟವಾದ ಕಾರಣ ಕೃಷಿ ಬದುಕು ಸಂತೃಪ್ತವಾಗಿದೆ, ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಹೇಳುತ್ತಾರೆ.
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…