Advertisement
ಅನುಕ್ರಮ

#ನಾನುಕೃಷಿಕ | ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ | ಕೃಷಿಗೆ ಇಳಿದ ಯುವಕ ಶ್ರೀನಂದನ ಮಾತು |

Share
ಯುವ ಕೃಷಿಕರನ್ನು ಪರಿಚಯಿಸುವ ಹಾಗೂ ಪ್ರೋತ್ಸಾಹಿಸುವ ಕೆಲಸವನ್ನು ದಿ ರೂರಲ್‌ ಮಿರರ್ ಆರಂಭಿಸಿದೆ. ಕೃಷಿ ಕೂಡಾ ಒಂದು ಹೆಮ್ಮೆಯ ಉದ್ಯೋಗ. ನೆಮ್ಮದಿ ಕೊಡುವ ಈ ಉದ್ಯೋಗ ಮಾಡುವ ಯುವ ಕೃಷಿಕರು ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವಂತಾಗಬೇಕು. ಯುವಕೃಷಿಕರು ನಿಮ್ಮ ಆಸುಪಾಸಿನಲ್ಲಿದ್ದರೆ ನಮಗೆ ಮಾಹಿತಿ ನೀಡಿ, ನಾನುಕೃಷಿಕ ಎಂದು ಹೆಮ್ಮೆಯಿಂದ ಹೇಳುವ ಅಭಿಯಾನ ಆರಂಭಿಸೋಣ

“ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ. ಹಿರಿಯರು ಮನೆಯಲ್ಲಿ ಮಾರ್ಗದರ್ಶನ ಮಾಡುವಾಗಲೇ ಕೃಷಿಯಲ್ಲಿ ಇದ್ದು ಬಿಡಿ…” ಹೀಗೆಂದು ಸಲಹೆ ನೀಡುವವರು ಯುವ ಕೃಷಿಕ ಶ್ರೀನಂದನ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಣ್ಮೂರಿನ ಶ್ರೀನಂದನ ಅವರು ಈಗ ಯುವ ಕೃಷಿಕ. ಎಣ್ಮೂರಿನ ಪ್ರಸನ್ನ ಕುಂಞಹಿತ್ಲುಹಾಗೂ ಭಾಗ್ಯ  ಅವರ ಪುತ್ರನಾಗಿರುವ ಶ್ರೀನಂದನ ಅವರು ಪದವಿಯ ಬಳಿಕ ಉದ್ಯೋಗಕ್ಕಾಗಿ ಬೆಂಗಳೂರು ಬಸ್ಸು ಹತ್ತಿದವರು. ಕೃಷಿಯಲ್ಲಿಯೇ ನೆಲೆಯೂರುವ ಉದ್ದೇಶ ಹೊಂದಿದ್ದ ಅವರು ಬೆಂಗಳೂರಿನ ಕೆಲಸಕ್ಕೆ ಗುಡ್‌ಬೈ ಹೇಳಿ ಕೃಷಿ ಕೆಲಸಕ್ಕೆ ಇಳಿದರು.

ತಂದೆ ಮಾಡಿರುವ ಕೃಷಿ ಕಾಯಕವನ್ನು ಮುಂದುವರಿಸುತ್ತಾ ಅಭಿವೃದ್ಧಿ ಪಡಿಸಿದ ಶ್ರೀನಂದನ್‌ ಅವರು ಕೃಷಿಗೆ ಬಂದ ವರ್ಷ ಕೊಳೆರೋಗದಿಂದ ಅಡಿಕೆ ವ್ಯಾಪಕವಾಗಿ ನಷ್ಟವಾಗಿತ್ತು. ಈ ಸಂದರ್ಭ ತಂದೆಯ ಬೆಂಬಲದ ಮಾತುಗಳಿಂದ ಧೈರ್ಯ ಬಂದಿತ್ತು ಎನ್ನುವ ಶ್ರೀನಂದನ, ಕೃಷಿಯಲ್ಲಿಎಳೆಯ ಪ್ರಾಯದಲ್ಲಿ ಅಂದರೆ ಬಹುಬೇಗನೆ ತೊಡಗಿಸಿಕೊಂಡಾಗ ಕೃಷಿ ಸವಾಲುಗಳು ತಿಳಿದು ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎನ್ನುತ್ತಾರೆ.

ಒಂದು ಸಮಯದಲ್ಲಿ ತೋಟದ ಕಾಳುಮೆಣಸು ಕೊಯ್ಯಲು ಜನ ಸಿಗದೇ ಇದ್ದಾಗ ನಾನೇ ಸ್ವತ: ಆರಂಭಿಸಿದೆ, ಈಗ ಅಭ್ಯಾಸವಾಗಿದೆ ಎನ್ನುತ್ತಾರೆ ಶ್ರೀನಂದನ.

ಮನೆಯಲ್ಲೂ ಮನೆಯಾಕೆಗೂ ಕೃಷಿ, ಹಳ್ಳಿ ಪ್ರದೇಶ ಇಷ್ಟವಾದ ಕಾರಣ ಕೃಷಿ ಬದುಕು ಸಂತೃಪ್ತವಾಗಿದೆ, ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಹೇಳುತ್ತಾರೆ.

ನಿಮ್ಮ ಆಸುಪಾಸಿನ ಯುವಕೃಷಿಕರ ಬಗ್ಗೆ ನಮಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿ. ವಾಟ್ಸಪ್‌ ಸಂಖ್ಯೆ 9449125447
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

8 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

24 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago