2022 ಕೃಷಿ ವರ್ಷ. ಕಳೆದ ಎರಡು ವರ್ಷಗಳಿಂದ ಕೃಷಿಗೆ ಮಾನ್ಯತೆ ಸಿಕ್ಕಿದೆ ಎನ್ನುವುದಕ್ಕೆ ಯಾವ ಅಂಜಿಕೆ, ಯಾವ ಮುಲಾಜೂ ಬೇಕಿಲ್ಲ. ಈಗ “#ನಾನುಕೃಷಿಕ” ಎನ್ನುವುದಕ್ಕೂ ಅಂಜಿಕೆ ಬೇಕಿಲ್ಲ. ಕೊರೋನಾ ಕಾಲಘಟ್ಟದ ನಂತರ ಕೃಷಿಗೆ ಭವಿಷ್ಯ ಇದೆ ಎನ್ನುವವರ ಸಂಖ್ಯೆ ಹೆಚ್ಚಾಗಿದೆ. 2022 ಖಂಡಿತವಾಗಿಯೂ ಕೃಷಿ ವರ್ಷ ಆಗಲಿದೆ ಎನ್ನುವ ಆಶಾವಾದೊಂದಿಗೆ ಈ ಪುಟ್ಟ ಹೆಜ್ಜೆ.
ಈ ಹೆಜ್ಜೆಯಲ್ಲಿ ನಮ್ಮ ನಡುವಿನ ಯುವ ಕೃಷಿಕರ ಪರಿಚಯ ಮಾಡುವುದು ನಮ್ಮ ಉದ್ದೇಶ. ಉನ್ನತ ವ್ಯಾಸಾಂಗ ಮಾಡಿ ಕೃಷಿಯಲ್ಲಿ ತೊಡಗಿರುವ ಯುವಕರು ಹಾಗೂ ಕೃಷಿಯನ್ನು ಸುಲಭ ಮಾಡಿರುವ ಕೃಷಿಕರ ಪರಿಚಯ ಎಲ್ಲರಿಗೂ ಆಗಬೇಕಿದೆ. ಹೀಗಾಗಿ ನಮ್ಮ ಪುಟ್ಟ ಹೆಜ್ಜೆಗೆ ನಿಮ್ಮೆಲ್ಲರ ಬೆಂಬಲ ಇರಲಿ ಎನ್ನುವ ಆಶಯದೊಂದಿಗೆ ಸದ್ಯದಲ್ಲೇ ಈ ಹೆಜ್ಜೆ ಇಡಲಿದ್ದೇವೆ. ನಿಗದಿತವಾಗಿ ಈ ಪರಿಚಯದ ಬರಹ ಪುಟ್ಟ ವಿಡಿಯೋ ಸಹಿತ ಪ್ರಕಟವಾಗಲಿದೆ.
ಸುಮಾರು 10 ವರ್ಷಗಳ ಹಿಂದೆ ನಮ್ಮ ಕೃಷಿ ಮಿತ್ರ ರಮೇಶ್ ದೇಲಂಪಾಡಿ ಅವರ ಸಹಕಾರದೊಂದಿಗೆ Agriculturist ಎನ್ನುವ ಕೃಷಿ ಗುಂಪನ್ನು ಆರಂಭ ಮಾಡಿದೆವು. ಆ ದಿನಗಳಲ್ಲಿ ಕೃಷಿ ಬಗ್ಗೆ ಚರ್ಚೆ ನಡೆಯುತ್ತಾ ದೂರವಾಣಿ ಮೂಲಕ ಹೆಚ್ಚಿನ ಸಂವಾದಗಳು ನಡೆಯುತ್ತಿದ್ದವು. ಗುಂಪು ವಿಸ್ತಾರಗೊಳ್ಳುತ್ತಾ ರಾಜ್ಯ ಮಟ್ಟದವರೆಗೆ ಹಬ್ಬಿ ಇಂದು ಸುಮಾರು 4 ಲಕ್ಷಕ್ಕೂ ಅಧಿಕ ಮಂದಿ ಹೊಂದಿದ್ದು ಪ್ರತಿ ದಿನವೂ ಸುಮಾರು 1 ಲಕ್ಷ ಮಂದಿ ವೀಕ್ಷಣೆ ಮಾಡುವ ಕೃಷಿಕರ ಗುಂಪಾಗಿದೆ. ಇದರಲ್ಲಿ ಬಹುಪಾಲು ಮಂದಿ ಬೆಂಗಳೂರು ಅಥವಾ ನಗರಗಳಿಂದಲೇ ವೀಕ್ಷಣೆಯಾಗುತ್ತದೆ. ಅದರಲ್ಲೂ ಯುವಕರೇ ಹೆಚ್ಚಾಗಿ ವೀಕ್ಷಣೆ ಮಾಡುತ್ತಿರುವುದು ನಮ್ಮ ಡಾಟಾ ಹೇಳುತ್ತದೆ.ಅಂತಹ ಯುವಕರೆಲ್ಲರೂ ಸಕ್ರಿಯವಾಗಿ ಕೃಷಿ ಸಂಗತಿಗಳನ್ನು ಗಮನಿಸುವುದು ಹಾಗೂ ಪ್ರತಿಕ್ರಿಯೆ ನೀಡುವುದು ಕಂಡಿದ್ದೇವೆ.
ಕೃಷಿಕರು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕೃಷಿ ಸಂಗತಿಗಳನ್ನು ಹಂಚಿಕೊಳ್ಳುತ್ತಾ ಕೃಷಿ ಸಮಸ್ಯೆಗಳು, ಪರಿಹಾರಗಳು, ಆಧುನಿಕ ಕೃಷಿ ಬಗ್ಗೆ ಸಂವಾದ ನಡೆಸುತ್ತಾರೆ. ಅಂದರೆ ಬಹುಪಾಲು ಯುವಕರು ಕೃಷಿಯಲ್ಲಿ ಆಸಕ್ತಿ ಹೊಂದಿದ್ದಾರೆ ಎನ್ನುವುದು ಖಚಿತವಾಗಿತ್ತು. ಆದರೆ ಕಾಲದ ಕಾರಣದಿಂದ, ಪರಿಸ್ಥಿತಿ ಕಾರಣದಿಂದ, ಕೃಷಿ ನಿರ್ಲಕ್ಷ್ಯ ಹಾಗೂ ಕೃಷಿಯಲ್ಲಿ ಸೋಲುಗಳೇ ಹೆಚ್ಚು ಎಂಬ ಕಾರಣದಿಂದ ಕೃಷಿಕ ಎನ್ನುವುದರ ಬದಲಾಗಿ ಉದ್ಯೋಗಿ ಎನ್ನುವುದು ಹೆಚ್ಚು ಆಪ್ತವಾಯಿತು. ಕೊರೋನಾ ಎಲ್ಲಾ ಪರಿಸ್ಥಿತಿ ಬದಲಿಸಿತು. ಕೊರೋನಾ ನಂತರ ಮತ್ತೆ ಕೃಷಿಗೆ ಹೆಚ್ಚು ಮಾನ್ಯತೆ ಬಂದಿತು. ವರ್ಕ್ ಫ್ರಂ ಹೋಂ ಮೂಲಕ ಯುವಕರಿಗೆ ಕೃಷಿಯಲ್ಲಿಯೂ ಮನಸ್ಸು ಹರಿಸಲು ಕಾರಣವಾಯಿತು. ಅನೇಕ ಯುವಕರು ಮತ್ತೆ ಕೃಷಿಯಲ್ಲಿ ತೊಡಗಿಸಿಕೊಂಡರು.
ಈಗ ಯುವಕರಿಗೆ ಕೃಷಿಯಲ್ಲಿನ ಸವಾಲುಗಳನ್ನು ಎದುರಿಸಲಿ ಸುಲಭದ ದಾರಿಗಳು. ಆದಾಯ ದ್ವಿಗುಣ ಮಾಡುವ ಯೋಜನೆಗಳು. ಉಪಬೆಳೆ ಹಾಗೂ ಯಾಂತ್ರೀಕರಣದ ಮೂಲಕ ಯಶಸ್ವೀ ಕೃಷಿ ಮಾಡುವ ಯೋಚನೆಗಳು. ಉಳಿದಂತೆ ಎಲ್ಲಾ ಸವಾಲುಗಳನ್ನೂ ಯುವ ಕೃಷಿಕರು ಈಗಾಗಲೇ ಎದುರಿಸಿದ್ದಾರೆ. ಇಂತಹ ಸವಾಲುಗಳನ್ನು ಎದುರಿಸಲು ಕೃಷಿಕರ ಪರಿಚಯ ಎಲ್ಲರಿಗೂ ಬೇಕಾಗಿದೆ. ಉನ್ನನ ವ್ಯಾಸಾಂಗ ಮಾಡಿ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಿದೆ , ಯಾವುದೇ ಕೀಳರಿಮೆ ಇಲ್ಲ ಎನ್ನುವುದನ್ನು ತಿಳಿಸಬೇಕಿದೆ.
ಇಂತಹ ಯುವ ಕೃಷಿಕರು ನಮ್ಮ ನಡುವೆ ಇದ್ದರೆ ನಮಗೂ ತಿಳಿಸಿ. ನಾವು ಪುಟ್ಟ ಕೃಷಿ ವೇದಿಕೆಯನ್ನು, ಯುವ ಕೃಷಿಕರ ವೇದಿಕೆಯನ್ನು ಜೊತೆಯಲ್ಲಿಯೇ ಸೃಷ್ಟಿಸೋಣ…
# ಮಹೇಶ್ ಪುಚ್ಚಪ್ಪಾಡಿ
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…