ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆಯಿಂದ ತಮಗೆ ಅತ್ಯಂತ ನೋವಾಗಿದೆ ಮತ್ತು ಇದು ದೊಡ್ಡ ತಪ್ಪು ನಿರ್ಧಾರ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಹೇಳಿದ್ದಾರೆ.
ಪುತ್ರ ಬಿಜೆಪಿ ಸೇರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆಂಟನಿ, ನಾನು ನನ್ನ ಕೊನೆಯ ಉಸಿರು ಇರುವವರೆಗೂ ಕಾಂಗ್ರೆಸ್ ಜೊತೆ ನಿಲ್ಲುತ್ತೇನೆ ಎಂದು ಹೇಳಿದರು ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಆಡಳಿತದ ದಿನಗಳನ್ನು ನೆನಪಿಸಿಕೊಂಡರು.ಅನಿಲ್ ನಿರ್ಧಾರವು ನಿಜವಾಗಿಯೂ ನೋವುಂಟು ಮಾಡಿದೆ. ಆದರೆ ಸಾಯುವವರೆಗೂ ನಾನು ಕಾಂಗ್ರೆಸ್ಸಿಗನಾಗಿರುತ್ತೇನೆ ಎಂದಿದ್ದಾರೆ.
ಏಕತೆ ಮತ್ತು ಧಾರ್ಮಿಕ ಸಾಮರಸ್ಯ ಭಾರತದ ಶಕ್ತಿ. ಆದರೆ 2014 ರ ನಂತರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವರು ವ್ಯವಸ್ಥಿತವಾಗಿ ವಿವಿಧತೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ಬಿಜೆಪಿ ಏಕರೂಪತೆಯನ್ನು ಮಾತ್ರ ನಂಬುತ್ತದೆ, ಅವರು ದೇಶದ ಸಾಂವಿಧಾನಿಕ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಬಿಜೆಪಿ ಸೇರಿದ ಅನಿಲ್ ಕೆ ಆಂಟನಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಅವರು ತಮ್ಮ ತಂದೆ ಮತ್ತು ಪಕ್ಷದ ಹಿರಿಯ ನಾಯಕ ಎ ಕೆ ಆಂಟನಿ ಅವರಿಗೆ ದ್ರೋಹ ಮಾಡಿದ್ದಾರೆ ಎಂದಿದೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…