ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆಯಿಂದ ತಮಗೆ ಅತ್ಯಂತ ನೋವಾಗಿದೆ ಮತ್ತು ಇದು ದೊಡ್ಡ ತಪ್ಪು ನಿರ್ಧಾರ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಹೇಳಿದ್ದಾರೆ.
ಪುತ್ರ ಬಿಜೆಪಿ ಸೇರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆಂಟನಿ, ನಾನು ನನ್ನ ಕೊನೆಯ ಉಸಿರು ಇರುವವರೆಗೂ ಕಾಂಗ್ರೆಸ್ ಜೊತೆ ನಿಲ್ಲುತ್ತೇನೆ ಎಂದು ಹೇಳಿದರು ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಆಡಳಿತದ ದಿನಗಳನ್ನು ನೆನಪಿಸಿಕೊಂಡರು.ಅನಿಲ್ ನಿರ್ಧಾರವು ನಿಜವಾಗಿಯೂ ನೋವುಂಟು ಮಾಡಿದೆ. ಆದರೆ ಸಾಯುವವರೆಗೂ ನಾನು ಕಾಂಗ್ರೆಸ್ಸಿಗನಾಗಿರುತ್ತೇನೆ ಎಂದಿದ್ದಾರೆ.
ಏಕತೆ ಮತ್ತು ಧಾರ್ಮಿಕ ಸಾಮರಸ್ಯ ಭಾರತದ ಶಕ್ತಿ. ಆದರೆ 2014 ರ ನಂತರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವರು ವ್ಯವಸ್ಥಿತವಾಗಿ ವಿವಿಧತೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ಬಿಜೆಪಿ ಏಕರೂಪತೆಯನ್ನು ಮಾತ್ರ ನಂಬುತ್ತದೆ, ಅವರು ದೇಶದ ಸಾಂವಿಧಾನಿಕ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಬಿಜೆಪಿ ಸೇರಿದ ಅನಿಲ್ ಕೆ ಆಂಟನಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಅವರು ತಮ್ಮ ತಂದೆ ಮತ್ತು ಪಕ್ಷದ ಹಿರಿಯ ನಾಯಕ ಎ ಕೆ ಆಂಟನಿ ಅವರಿಗೆ ದ್ರೋಹ ಮಾಡಿದ್ದಾರೆ ಎಂದಿದೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…