ಜಗಜ್ಯೋತಿ ಬಸವಣ್ಣನವರ ಪವಿತ್ರ ಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ: ಯೋಗಿ ಆದಿತ್ಯನಾಥ್​

April 26, 2023
8:48 PM

 ಜಗಜ್ಯೋತಿ ಬಸವಣ್ಣನವರ ಪವಿತ್ರ ಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದರು. ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಪ್ರಜಾಪ್ರಭುತ್ವದ ತಾಯಿ. ಶ್ರೀರಾಮನ ಪರಮಭಕ್ತ ಆಂಜನೇಯನ ಜನ್ಮಸ್ಥಳ ಕರ್ನಾಟಕ. ಡಬಲ್​ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಆಗುತ್ತಿದೆ. 1000 ವರ್ಷಗಳ ಹಿಂದಿನಿಂದ ಕರ್ನಾಟಕ-ಯುಪಿ ನಡುವೆ ಬಾಂಧವ್ಯ ಇದೆ ಎಂದು ಹೇಳಿದರು. ದೇಶದ ಸಂತರು, ಸಾಧುಗಳ ಆಶೀರ್ವಾದದಿಂದ ಇಲ್ಲಿ ಬಂದಿದ್ದೇನೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಭಾರತ ಅಭಿವೃದ್ಧಿ ಆಗುತ್ತಿದೆ. ಭಾರತ ವಿಶ್ವದ ಶಕ್ತಿಯುತವಾದ ರಾಷ್ಟ್ರವಾಗಿದೆ. ವಿಶ್ವದ ಪ್ರಬಲ ಜಿ-20 ರಾಷ್ಟ್ರಗಳ ನೇತೃತ್ವವನ್ನು ಭಾರತ ವಹಿಸುತ್ತಿದೆ. ಕರ್ನಾಟಕ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದರು.

Advertisement
Advertisement

ಕಾಂಗ್ರೆಸ್, ಜೆಡಿಎಸ್​ ವಿರುದ್ಧ ಯೋಗಿ ಆದಿತ್ಯನಾಥ್ ವಾಗ್ದಾಳಿ 

ಕಾಂಗ್ರೆಸ್, ಜೆಡಿಎಸ್ ಎರಡೂ ಕೂಡ ಯಾವುದೇ ಅಭಿವೃದ್ಧಿ ಮಾಡಲ್ಲ. ಸಮಾಜವನ್ನು ವಿಭಜಿಸುವುದರಲ್ಲಿ ಕಾಂಗ್ರೆಸ್, ಜೆಡಿಎಸ್​ನವರು ನಿಸ್ಸೀಮರು. ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳಲ್ಲಿ ಯಾವುದೇ ದೂರದೃಷ್ಟಿ ಹೊಂದಿಲ್ಲ. ದೇಶದಲ್ಲಿ 60 ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ಏನೂ ಮಾಡಲಿಲ್ಲ. ಸಮಾಜವನ್ನು ಜಾತಿ ಹೆಸರಿನಲ್ಲಿ ಒಡೆಯಲು ಪ್ರಯತ್ನಿಸುತ್ತಿದ್ದಾರೆ. ದೇಶದ ಪ್ರತಿ ನಾಗರಿಕನ ಸಶಕ್ತೀಕರಣಗೊಳಿಸುವುದು ನಮ್ಮ ಉದ್ದೇಶ ಎಂದು ಕಾಂಗ್ರೆಸ್​ ಪಕ್ಷದ ತುಷ್ಟೀಕರಣ ರಾಜಕಾರಣದ ವಿರುದ್ಧ ವಾಗ್ದಾಳಿ ಮಾಡಿದರು. ಸಬ್​ಕಾ ಸಾಥ್, ಸಬ್​ಕಾ ವಿಕಾಸ್ ಎಂಬುವುದು ಮೋದಿಯವರ ಮಂತ್ರ. ಕೊರೊನಾ ವೇಳೆ ಮೋದಿ ಸರ್ಕಾರ ಫ್ರೀ ವ್ಯಾಕ್ಸಿನ್, ರೇಷನ್​ ನೀಡಿದೆ ಎಂದು ಹೇಳಿದರು.

Advertisement

ಬಿಎಸ್​ವೈ, ಸಿಎಂ ಬೊಮ್ಮಾಯಿಗೆ ಅಭಿನಂದನೆ  

ವೈದ್ಯಕೀಯ ಪರೀಕ್ಷೆ ಕನ್ನಡದಲ್ಲಿ ಬರೆಯಲು ಸರ್ಕಾರ ಅವಕಾಶ ನೀಡಿದೆ. ಕರ್ನಾಟಕದಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಹಾಗಾಗಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​ವೈಗೆ ಅಭಿನಂದನೆ ಸಲ್ಲಿಸುತ್ತೇನೆ. ಉತ್ತರ ಪ್ರದೇಶದಲ್ಲಿ ಗೂಂಡಾಗಳನ್ನು ಮಟ್ಟಹಾಕಿದ್ದೇವೆ. ರಾಮ, ಕೃಷ್ಣನ ಜನಸ್ಥಳದಲ್ಲಿ ಪಾಪದ ಕೆಲಸಗಳನ್ನ ಮಾಡಲು ಬಿಡಲ್ಲ ಎಂದು ಕಿಡಿಕಾರಿದರು.

ಯೋಗಿ ಆದಿತ್ಯನಾಥ್​ ಬಹಿರಂಗ ಆಹ್ವಾನ  

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಹಿನ್ನೆಲೆ ಯೋಗಿ ಆದಿತ್ಯನಾಥ್​ ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ. ನಾನು ಇವತ್ತು ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇನೆ. ಜನವರಿ ಭಗಾವನ್ ಶ್ರೀರಾಮ ಮಂದಿರ ಉದ್ಘಾಟನೆಯಾಗುತ್ತೆ. ಆ ಕಾರ್ಯಕ್ರಮಕ್ಕೆ ನೀವೆಲ್ಲರೂ ಬರಬೇಕು. ಉತ್ತರ ಪ್ರದೇಶದ ಸೇವಕನಾಗಿ ನಿಮಗೆ ಇವತ್ತೆ ನಾನು ಆಹ್ವಾನ ನೀಡುತ್ತಿದ್ದೇನೆ ಎಂದು ಹೇಳಿದರು.

Advertisement

ಯೋಗಿ ಆದಿತ್ಯನಾಥ್​ ಎಲ್ಲೆಲ್ಲಿ ಪ್ರಚಾರ ​ 

ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಮಧ್ಯಾಹ್ನ ಬಸವನ ಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್​ಕೆ ಬೆಳ್ಳುಬ್ಬಿ ಪರ ಪ್ರಚಾರ ಮಾಡಿದರು. ಬಳಿಕ ಇಂಡಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸಾರ್ವಜನಿಕ ಸಮಾವೇಶ ಮತ್ತು ಅಭ್ಯರ್ಥಿ ಕಸಗೌಡ ಬಿರಾದಾರ್​ ಪರ ಪ್ರಚಾರ ನಡೆಸಿದರು.

ಬಳಿಕ TP ಪ್ರಕಾರ ರಸ್ತೆ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಹೆಲಿಕಾಪ್ಟರ್​ ಮೂಲಕ ಹುಬ್ಬಳ್ಳಿಗೆ ತೆರಳಿದ್ದು, ಹುಬ್ಬಳ್ಳಿಯಿಂದ ವಿಶೇಷ ವಿಮಾನದಲ್ಲಿ ಲಖನೌಗೆ ಪ್ರಯಾಣ ಬೆಳೆಸಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22.09.2024 | ರಾಜ್ಯದಲ್ಲಿ ಮತ್ತೆ ಕೆಲವು ಕಡೆ ಮಳೆ ಸಾಧ್ಯತೆ
September 22, 2024
11:50 AM
by: ಸಾಯಿಶೇಖರ್ ಕರಿಕಳ
ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರಕ್ಕೆ ಸೂಚನೆ |
September 21, 2024
2:18 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲ
September 21, 2024
2:15 PM
by: ದ ರೂರಲ್ ಮಿರರ್.ಕಾಂ
ಪ್ಲಾಸ್ಟಿಕ್ ಪೆಟ್, ಬಾಟಲ್ ಗಳ ಬಳಕೆ ನಿಷೇಧ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
September 21, 2024
2:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror