Advertisement
MIRROR FOCUS

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್​ ಬಳಸಿ | ಸಸ್ಯಜನ್ಯ ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ತುರ್ತು ಕ್ರಮ | ಸಚಿವ ಈಶ್ವರ್ ಖಂಡ್ರೆ

Share

ಪ್ರಕೃತಿಗೆ(Nature) ಬಹಳ ತ್ರಾಸದಾಯಕವಾದದ್ದು ಈಗ ಪ್ಲಾಸ್ಟಿಕ್‌ ನ(Plastic) ಹಾವಳಿ. ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್‌ ಕೈ ಚೀಲದ್ದೇ(Carry bag) ಕಾರುಬಾರು.. ಇದರ ನಿಯಂತ್ರಣ ಬಹಳ ಕಷ್ಟವಾಗಿದೆ. ಈ ಬಗ್ಗೆ ಸರ್ಕಾರವೇ(Govt) ಏನಾದರು ದಿಟ್ಟ ಕ್ರಮಗಳನ್ನು ಕೈಗೊಂಡರೆ ಮಾತ್ರ ಸಾಧ್ಯ. ಇದೀಗ ಜೈವಿಕವಾಗಿ ವಿಘಟನೆಯಾಗುವ(Biodegradable)ಮತ್ತು 180 ದಿನಗಳಲ್ಲಿ ಕರಗಿಹೋಗುವ(Dissolving) ಸಸ್ಯಜನ್ಯ ಪಾಲಿ ಲಿಕ್ವಿಡ್ ಆ್ಯಸಿಡ್ ಪೋಲಿಮರ್(Vegetable poly liquid acid polymer)ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ(Sell) ಅವಕಾಶ ಆಗುವಂತೆ ತುರ್ತು ಕ್ರಮ ಕೈಗೊಳ್ಳಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ(Minister of Forests, Biology and Environment) ಈಶ್ವರ್ ಖಂಡ್ರೆ(Eshwar Khandre) ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ, ಸುಟ್ಟರೆ ವಾತಾವರಣವನ್ನೇ ಕಲುಷಿತಗೊಳಿಸುವ ಏಕ ಬಳಕೆ ಪ್ಲಾಸ್ಟಿಕ್ ಈ ಪರಿಸರಕ್ಕೆ ಮಾರಕ. ಇದಕ್ಕೆ ಪರ್ಯಾಯವಾಗಿ ಜೈವಿಕವಾಗಿ ಕೊಳೆಯುವಂತಹ ಉತ್ಪನ್ನ ಅಗತ್ಯ ಎಂದರು. ಹಿಂದೆಂದಿಗಿಂತಲೂ ಮಾಲಿನ್ಯ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಜೈವಿಕವಾಗಿ ವಿಘಟನೆಯಾಗುವ ಸಸ್ಯಜನ್ಯ ಪಾಲಿ ಲಿಕ್ವಿಡ್ ಆ್ಯಸಿಡ್ ಪೋಲಿಮರ್ ಚೀಲಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ತೊಡಕಾಗಿರುವ ಕರ್ನಾಟಕ ಸರ್ಕಾರದ 2016ರ ಅಧಿಸೂಚನೆಗೆ ತಿದ್ದುಪಡಿ ತಂದು ಇಲ್ಲವೇ ಹಿಂಪಡೆದು, ಕೇಂದ್ರ ಪರಿಸರ ಇಲಾಖೆಯ 2021ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಅಧಿಕಾರಿಗಳೊಂದಿಗೆ ಸಚಿವ ಈಶ್ವರ್ ಖಂಡ್ರೆ 

ಮೆಕ್ಕೆಜೋಳದ ಸಾರದಿಂದ ತಯಾರಿಸುವ ಕೈಚೀಲಗಳು 6 ತಿಂಗಳುಗಳಲ್ಲಿ ಇಟ್ಟಲ್ಲಿಯೇ ಕರಗಿ ಹೋಗುತ್ತವೆ ಎಂದು ಸಭೆಗೆ ಪರಿಸರ ಅಧಿಕಾರಿಗಳು ವಿವರಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಈ ಕೈಚೀಲಗಳು ಪರಿಸರಕ್ಕೆ ಹಾನಿಕಾರಕವಲ್ಲ ಮತ್ತು ವೈಜ್ಞಾನಿಕವಾಗಿ ವಿಘಟನೆಯಾಗುತ್ತದೆ ಎಂದು ಸಾಬೀತಾಗಿದ್ದಲ್ಲಿ, ಇದಕ್ಕೆ ಶೀಘ್ರ ಅನುಮತಿ ನೀಡಿ ಎಂದು ಹೇಳಿದರು. ಈ ಪೋಲಿಮರ್ ಕೈಚೀಲಗಳ ದರ ಕೂಡ ಪ್ರಸ್ತುತ ಲಭ್ಯ ಇರುವ ಏಕ ಬಳಕೆ ಪ್ಲಾಸ್ಟಿಕ್ ಕೈಚೀಲಗಳ ದರದಲ್ಲೇ ಲಭ್ಯವಾದರೆ ಯಾರೂ ಆಗ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಖರೀದಿಸುವುದಿಲ್ಲ ಎಂದೂ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು. ಸಭೆಯಲ್ಲಿ ಅಧಿಕಾರೇತರ ಸದಸ್ಯ ಶರಣಕುಮಾರ ಮೋದಿ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ. ರವಿ ಉಪಸ್ಥಿತರಿದ್ದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

3 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

3 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

3 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

3 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

3 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

3 hours ago