MIRROR FOCUS

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್​ ಬಳಸಿ | ಸಸ್ಯಜನ್ಯ ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ತುರ್ತು ಕ್ರಮ | ಸಚಿವ ಈಶ್ವರ್ ಖಂಡ್ರೆ

Share

ಪ್ರಕೃತಿಗೆ(Nature) ಬಹಳ ತ್ರಾಸದಾಯಕವಾದದ್ದು ಈಗ ಪ್ಲಾಸ್ಟಿಕ್‌ ನ(Plastic) ಹಾವಳಿ. ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್‌ ಕೈ ಚೀಲದ್ದೇ(Carry bag) ಕಾರುಬಾರು.. ಇದರ ನಿಯಂತ್ರಣ ಬಹಳ ಕಷ್ಟವಾಗಿದೆ. ಈ ಬಗ್ಗೆ ಸರ್ಕಾರವೇ(Govt) ಏನಾದರು ದಿಟ್ಟ ಕ್ರಮಗಳನ್ನು ಕೈಗೊಂಡರೆ ಮಾತ್ರ ಸಾಧ್ಯ. ಇದೀಗ ಜೈವಿಕವಾಗಿ ವಿಘಟನೆಯಾಗುವ(Biodegradable)ಮತ್ತು 180 ದಿನಗಳಲ್ಲಿ ಕರಗಿಹೋಗುವ(Dissolving) ಸಸ್ಯಜನ್ಯ ಪಾಲಿ ಲಿಕ್ವಿಡ್ ಆ್ಯಸಿಡ್ ಪೋಲಿಮರ್(Vegetable poly liquid acid polymer)ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ(Sell) ಅವಕಾಶ ಆಗುವಂತೆ ತುರ್ತು ಕ್ರಮ ಕೈಗೊಳ್ಳಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ(Minister of Forests, Biology and Environment) ಈಶ್ವರ್ ಖಂಡ್ರೆ(Eshwar Khandre) ಸೂಚನೆ ನೀಡಿದ್ದಾರೆ.

Advertisement
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ, ಸುಟ್ಟರೆ ವಾತಾವರಣವನ್ನೇ ಕಲುಷಿತಗೊಳಿಸುವ ಏಕ ಬಳಕೆ ಪ್ಲಾಸ್ಟಿಕ್ ಈ ಪರಿಸರಕ್ಕೆ ಮಾರಕ. ಇದಕ್ಕೆ ಪರ್ಯಾಯವಾಗಿ ಜೈವಿಕವಾಗಿ ಕೊಳೆಯುವಂತಹ ಉತ್ಪನ್ನ ಅಗತ್ಯ ಎಂದರು. ಹಿಂದೆಂದಿಗಿಂತಲೂ ಮಾಲಿನ್ಯ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಜೈವಿಕವಾಗಿ ವಿಘಟನೆಯಾಗುವ ಸಸ್ಯಜನ್ಯ ಪಾಲಿ ಲಿಕ್ವಿಡ್ ಆ್ಯಸಿಡ್ ಪೋಲಿಮರ್ ಚೀಲಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ತೊಡಕಾಗಿರುವ ಕರ್ನಾಟಕ ಸರ್ಕಾರದ 2016ರ ಅಧಿಸೂಚನೆಗೆ ತಿದ್ದುಪಡಿ ತಂದು ಇಲ್ಲವೇ ಹಿಂಪಡೆದು, ಕೇಂದ್ರ ಪರಿಸರ ಇಲಾಖೆಯ 2021ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಅಧಿಕಾರಿಗಳೊಂದಿಗೆ ಸಚಿವ ಈಶ್ವರ್ ಖಂಡ್ರೆ 

ಮೆಕ್ಕೆಜೋಳದ ಸಾರದಿಂದ ತಯಾರಿಸುವ ಕೈಚೀಲಗಳು 6 ತಿಂಗಳುಗಳಲ್ಲಿ ಇಟ್ಟಲ್ಲಿಯೇ ಕರಗಿ ಹೋಗುತ್ತವೆ ಎಂದು ಸಭೆಗೆ ಪರಿಸರ ಅಧಿಕಾರಿಗಳು ವಿವರಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಈ ಕೈಚೀಲಗಳು ಪರಿಸರಕ್ಕೆ ಹಾನಿಕಾರಕವಲ್ಲ ಮತ್ತು ವೈಜ್ಞಾನಿಕವಾಗಿ ವಿಘಟನೆಯಾಗುತ್ತದೆ ಎಂದು ಸಾಬೀತಾಗಿದ್ದಲ್ಲಿ, ಇದಕ್ಕೆ ಶೀಘ್ರ ಅನುಮತಿ ನೀಡಿ ಎಂದು ಹೇಳಿದರು. ಈ ಪೋಲಿಮರ್ ಕೈಚೀಲಗಳ ದರ ಕೂಡ ಪ್ರಸ್ತುತ ಲಭ್ಯ ಇರುವ ಏಕ ಬಳಕೆ ಪ್ಲಾಸ್ಟಿಕ್ ಕೈಚೀಲಗಳ ದರದಲ್ಲೇ ಲಭ್ಯವಾದರೆ ಯಾರೂ ಆಗ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಖರೀದಿಸುವುದಿಲ್ಲ ಎಂದೂ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು. ಸಭೆಯಲ್ಲಿ ಅಧಿಕಾರೇತರ ಸದಸ್ಯ ಶರಣಕುಮಾರ ಮೋದಿ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ. ರವಿ ಉಪಸ್ಥಿತರಿದ್ದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

5 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

10 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

11 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

11 hours ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

19 hours ago