Advertisement
Political mirror

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು, ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ: ಬಿಜೆಪಿಗೆ ಬೆಂಬಲಿಸಲು ನಟ ಸುದೀಪ್ ನಿರ್ಧಾರ

Share

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ಅವರು ಬುಧವಾರ ಹೇಳಿದ್ದಾರೆ.

ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್ ಅವರು, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ ಪಕ್ಷದ ಪರವಾಗಿ ಪ್ರಚಾರ ಮಾಡುವೆ ಎಂದೂ ಹೇಳಲಿಲ್ಲ. ಆದರೆ, ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆಂದು ಹೇಳಿದ್ದಾರೆ.

ಕಷ್ಟದ ದಿನಗಳಲ್ಲಿ ನನ್ನ ಜೊತೆಗೆ ನಿಂತಿದ್ದು ಸಿಎಂ ಬೊಮ್ಮಾಯಿಯವರು. ನಾನು ಚಿಕ್ಕವಯಸ್ಸಿನಿಂದ ಅವರನ್ನು ನೋಡಿದ್ದೇನೆ. ಚಿತ್ರರಂಗಕ್ಕೆ ಬಂದಾಗ ಕೆಲವೇ ಕೆಲವರು ನನ್ನ ಪರ ನಿಂತಿದ್ದರು. ಅಂತಹವರು ನನ್ನ ಮಾಮ ಸಿಎಂ ಬೊಮ್ಮಾಯಿ. ನಾನು ಅವರ ಪರವಾಗಿ ನಿಲ್ಲಲು ಬಂದೆ. ನಾನು ಚಿತ್ರರಂಗ ಪ್ರವೇಶಿಸುವಾಗ ಗಾಡ್ ಫಾದರ್ ಅಂತ ಯಾರು ಇರಲಿಲ್ಲ. ಆ ಟೈಮ್​ಲ್ಲಿ ಅವರು ನನ್ನ ಪರ ಇದ್ದರು. ಹೀಗಾಗಿ ನಾನು ಆ ವ್ಯಕ್ತಿ ಪರ ಬೆಂಬಲ ಕೊಡೋಕೆ ಬಂದಿದ್ದೀನಿ. ಹಾಗೆ ಕೆಲ ಸ್ನೇಹಿತರು ಇದ್ದಾರೆ. ಅವರ ಪರವೂ ನಿಲ್ಲುತ್ತೇನೆ ಎಂದು ತಿಳಿಸಿದರು.

ನನ್ನ ಲೈಫ್ ನಲ್ಲಿ ಬೊಮ್ಮಾಯಿಯವರು ಒಳ್ಳೆಯ ಸ್ಥಾನದಲ್ಲಿದ್ದಾರೆ. ಅವರು ಎಲ್ಲಿ ಹೇಳುತ್ತಾರೋ ಅಲ್ಲಿ ಕೆಲಸ ಮಾಡಲು ಸಿದ್ಧನಿದ್ದೇನೆ. ತಯಾರಿದ್ದೇನೆ. ಒಬ್ಬ ತಂದೆಯ ಮಾತು ಕೇಳುವ ರೀತಿ ಅವರ ಮಾತು ಕೇಳುತ್ತೇನೆ. ಪಕ್ಷ ಕರೆದಿರೋದು ನನಗೆ ಗೊತ್ತಿಲ್ಲ. ಬೊಮ್ಮಾಯಿ ಬೇರೆ ಪಕ್ಷದಲ್ಲಿದ್ದರೂ ಅವರ ಜೊತೆ ನಾನು‌ ನಿಲ್ಲುತ್ತಿದ್ದೆ. ನಾನು ಸಿಎಂ ಬೊಮ್ಮಾಯಿ ಅವರ ವಿಷಯದಲ್ಲಿ ಪಕ್ಷ ನೋಡುತ್ತಿಲ್ಲ, ವ್ಯಕ್ತಿ ನೋಡುತ್ತೇನೆ ಎಂದರು.

ನನಗೆ ಎಲ್ಲ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಆಗಲ್ಲ. ಪಕ್ಷ ಅಂತಾ ಇಲ್ಲಿಗೆ ಬಂದಿಲ್ಲ, ವ್ಯಕ್ತಿಯ ಕಾಳಜಿಗೆ ಬಂದಿದ್ದೇನೆ.  ಹಣಕ್ಕಾಗಿ ನಾನು ಚುನಾವಣಾ ಪ್ರಚಾರ ಮಾಡುತ್ತಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಮಾತ್ರ ನನ್ನ ಬೆಂಬಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ. ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವುದು ಸಾಕಷ್ಟು ಇದೆ ಎಂದು ಹೇಳಿದರು. ಈ ಮೂಲಕ ರಾಜಕೀಯ ಪ್ರವೇಶ ಕುರಿತ ಸುದ್ದಿಗಳಿಗೆ ತೆರೆ ಎಳೆದರು.

ಪ್ರಧಾನಿ ಮೋದಿ ಬಗ್ಗೆ ಗೌರವವಿದೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಣಯಗಳ ಬಗ್ಗೆ ನನಗೆ ಸಂಪೂರ್ಣ ಗೌರವವಿದೆ. ಅವರ ನಿರ್ಣಯಗಳ ಬಗ್ಗೆ ಹೆಮ್ಮ ಇದೆ. ಆದರೆ, ನಾನಿಂದು ಬಂದಿರುವುದು ರಾಜಕೀಯ ಪ್ರವೇಶ ವಿಚಾರವಾಗಿ ಅಲ್ಲ. ನಾನು ಬಂದಿರೋದು ಕೇವಲ ವ್ಯಕ್ತಿಗೋಸ್ಕರ ಅಷ್ಟೇ ಎಂದು ಸ್ಪಷ್ಟಪಡಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago