ಸಿದ್ದರಾಮಯ್ಯಗಾಗಿ ಒದೆ ತಿಂದಿದ್ದೇನೆ, ನನ್ನ ಪ್ಯಾಂಟ್‌ ಹರಿದು ಹಾಕಿದ್ರು‌ | ವಿ.ಸೋಮಣ್ಣ

April 21, 2023
8:32 PM

2006ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಯಾರು? ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 2006ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯಗೋಸ್ಕರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒದೆ ತಿಂದಿದ್ದೇನೆ. ಬರಿಮೈಯಲ್ಲಿ ದೇವಲಾಪುರದಿಂದ ಮೈಸೂರಿಗೆ ಹೋಗಿದ್ದೇನೆ. ಆವತ್ತು ನನ್ನ ಕಾರಿನ ಗ್ಲಾಸ್ ಒಡೆದಿದ್ರು, ಪ್ಯಾಂಟ್ ಹರಿದು ಹಾಕಿದ್ದರು. ಅಂದು ನನ್ನ ಸಮುದಾಯದವರನ್ನೇ ಎದುರು ಹಾಕಿಕೊಂಡು ಅವರಿಗೋಸ್ಕರ ಕೆಲಸ ಮಾಡಿದ್ದೆ. ಇದೆಲ್ಲಾ ಸಿದ್ದರಾಮಯ್ಯ ಸಾಹೇಬರ ತಲೇಲಿ ಇಲ್ಲ ಎಂದು ಕುಟುಕಿದ್ದಾರೆ.

ನಾನು ಸಾಹೇಬ್ರೆ ಅಂತೀನಿ ಅವರು ಏಕ ವಚನದಲ್ಲಿ ಮಾತನಾಡ್ತಾರೆ, ಇದೇ ನನಗು ಅವರಿಗು ಇರೋ ವ್ಯತ್ಯಾಸ. ಸಿದ್ದರಾಮಯ್ಯ ಈಗ ವಿರೋಧ ಪಕ್ಷದ ನಾಯಕರೂ ಅಲ್ಲ ನಾನು ಮಂತ್ರಿನೂ ಅಲ್ಲ, ನಾನೂ ಅಭ್ಯರ್ಥಿ, ಅವರೂ ಅಭ್ಯರ್ಥಿ. ನಾನು ಅವರನ್ನು ಮುತ್ಸದ್ದಿ ನಾಯಕ ಎಂದು ಭಾವಿಸಿದ್ದೆ, ಅವರು ಅವನ್ಯಾರು, ಇವನ್ಯಾರು ಅನ್ನೋ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೇದು. ರಾಜಕೀಯದಲ್ಲಿ ತಾಳ್ಮೆ ಮುಖ್ಯ ಎಂದ ಸೋಮಣ್ಣ, ನಾನು ವರುಣಾದಲ್ಲಿ ಸ್ಪರ್ಧೆ ಮಾಡ್ತಿರೋದು ವಿಧಿ ನಿಯಮ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror