ಸುದ್ದಿಗಳು

ಸಿದ್ದರಾಮಯ್ಯಗಾಗಿ ಒದೆ ತಿಂದಿದ್ದೇನೆ, ನನ್ನ ಪ್ಯಾಂಟ್‌ ಹರಿದು ಹಾಕಿದ್ರು‌ | ವಿ.ಸೋಮಣ್ಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2006ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

Advertisement

ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಯಾರು? ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 2006ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯಗೋಸ್ಕರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒದೆ ತಿಂದಿದ್ದೇನೆ. ಬರಿಮೈಯಲ್ಲಿ ದೇವಲಾಪುರದಿಂದ ಮೈಸೂರಿಗೆ ಹೋಗಿದ್ದೇನೆ. ಆವತ್ತು ನನ್ನ ಕಾರಿನ ಗ್ಲಾಸ್ ಒಡೆದಿದ್ರು, ಪ್ಯಾಂಟ್ ಹರಿದು ಹಾಕಿದ್ದರು. ಅಂದು ನನ್ನ ಸಮುದಾಯದವರನ್ನೇ ಎದುರು ಹಾಕಿಕೊಂಡು ಅವರಿಗೋಸ್ಕರ ಕೆಲಸ ಮಾಡಿದ್ದೆ. ಇದೆಲ್ಲಾ ಸಿದ್ದರಾಮಯ್ಯ ಸಾಹೇಬರ ತಲೇಲಿ ಇಲ್ಲ ಎಂದು ಕುಟುಕಿದ್ದಾರೆ.

ನಾನು ಸಾಹೇಬ್ರೆ ಅಂತೀನಿ ಅವರು ಏಕ ವಚನದಲ್ಲಿ ಮಾತನಾಡ್ತಾರೆ, ಇದೇ ನನಗು ಅವರಿಗು ಇರೋ ವ್ಯತ್ಯಾಸ. ಸಿದ್ದರಾಮಯ್ಯ ಈಗ ವಿರೋಧ ಪಕ್ಷದ ನಾಯಕರೂ ಅಲ್ಲ ನಾನು ಮಂತ್ರಿನೂ ಅಲ್ಲ, ನಾನೂ ಅಭ್ಯರ್ಥಿ, ಅವರೂ ಅಭ್ಯರ್ಥಿ. ನಾನು ಅವರನ್ನು ಮುತ್ಸದ್ದಿ ನಾಯಕ ಎಂದು ಭಾವಿಸಿದ್ದೆ, ಅವರು ಅವನ್ಯಾರು, ಇವನ್ಯಾರು ಅನ್ನೋ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೇದು. ರಾಜಕೀಯದಲ್ಲಿ ತಾಳ್ಮೆ ಮುಖ್ಯ ಎಂದ ಸೋಮಣ್ಣ, ನಾನು ವರುಣಾದಲ್ಲಿ ಸ್ಪರ್ಧೆ ಮಾಡ್ತಿರೋದು ವಿಧಿ ನಿಯಮ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

26 minutes ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

37 minutes ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

45 minutes ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

48 minutes ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

51 minutes ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

55 minutes ago