2006ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಯಾರು? ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 2006ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯಗೋಸ್ಕರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒದೆ ತಿಂದಿದ್ದೇನೆ. ಬರಿಮೈಯಲ್ಲಿ ದೇವಲಾಪುರದಿಂದ ಮೈಸೂರಿಗೆ ಹೋಗಿದ್ದೇನೆ. ಆವತ್ತು ನನ್ನ ಕಾರಿನ ಗ್ಲಾಸ್ ಒಡೆದಿದ್ರು, ಪ್ಯಾಂಟ್ ಹರಿದು ಹಾಕಿದ್ದರು. ಅಂದು ನನ್ನ ಸಮುದಾಯದವರನ್ನೇ ಎದುರು ಹಾಕಿಕೊಂಡು ಅವರಿಗೋಸ್ಕರ ಕೆಲಸ ಮಾಡಿದ್ದೆ. ಇದೆಲ್ಲಾ ಸಿದ್ದರಾಮಯ್ಯ ಸಾಹೇಬರ ತಲೇಲಿ ಇಲ್ಲ ಎಂದು ಕುಟುಕಿದ್ದಾರೆ.
ನಾನು ಸಾಹೇಬ್ರೆ ಅಂತೀನಿ ಅವರು ಏಕ ವಚನದಲ್ಲಿ ಮಾತನಾಡ್ತಾರೆ, ಇದೇ ನನಗು ಅವರಿಗು ಇರೋ ವ್ಯತ್ಯಾಸ. ಸಿದ್ದರಾಮಯ್ಯ ಈಗ ವಿರೋಧ ಪಕ್ಷದ ನಾಯಕರೂ ಅಲ್ಲ ನಾನು ಮಂತ್ರಿನೂ ಅಲ್ಲ, ನಾನೂ ಅಭ್ಯರ್ಥಿ, ಅವರೂ ಅಭ್ಯರ್ಥಿ. ನಾನು ಅವರನ್ನು ಮುತ್ಸದ್ದಿ ನಾಯಕ ಎಂದು ಭಾವಿಸಿದ್ದೆ, ಅವರು ಅವನ್ಯಾರು, ಇವನ್ಯಾರು ಅನ್ನೋ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೇದು. ರಾಜಕೀಯದಲ್ಲಿ ತಾಳ್ಮೆ ಮುಖ್ಯ ಎಂದ ಸೋಮಣ್ಣ, ನಾನು ವರುಣಾದಲ್ಲಿ ಸ್ಪರ್ಧೆ ಮಾಡ್ತಿರೋದು ವಿಧಿ ನಿಯಮ ಎಂದು ಹೇಳಿದ್ದಾರೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…