2006ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಯಾರು? ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 2006ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯಗೋಸ್ಕರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒದೆ ತಿಂದಿದ್ದೇನೆ. ಬರಿಮೈಯಲ್ಲಿ ದೇವಲಾಪುರದಿಂದ ಮೈಸೂರಿಗೆ ಹೋಗಿದ್ದೇನೆ. ಆವತ್ತು ನನ್ನ ಕಾರಿನ ಗ್ಲಾಸ್ ಒಡೆದಿದ್ರು, ಪ್ಯಾಂಟ್ ಹರಿದು ಹಾಕಿದ್ದರು. ಅಂದು ನನ್ನ ಸಮುದಾಯದವರನ್ನೇ ಎದುರು ಹಾಕಿಕೊಂಡು ಅವರಿಗೋಸ್ಕರ ಕೆಲಸ ಮಾಡಿದ್ದೆ. ಇದೆಲ್ಲಾ ಸಿದ್ದರಾಮಯ್ಯ ಸಾಹೇಬರ ತಲೇಲಿ ಇಲ್ಲ ಎಂದು ಕುಟುಕಿದ್ದಾರೆ.
ನಾನು ಸಾಹೇಬ್ರೆ ಅಂತೀನಿ ಅವರು ಏಕ ವಚನದಲ್ಲಿ ಮಾತನಾಡ್ತಾರೆ, ಇದೇ ನನಗು ಅವರಿಗು ಇರೋ ವ್ಯತ್ಯಾಸ. ಸಿದ್ದರಾಮಯ್ಯ ಈಗ ವಿರೋಧ ಪಕ್ಷದ ನಾಯಕರೂ ಅಲ್ಲ ನಾನು ಮಂತ್ರಿನೂ ಅಲ್ಲ, ನಾನೂ ಅಭ್ಯರ್ಥಿ, ಅವರೂ ಅಭ್ಯರ್ಥಿ. ನಾನು ಅವರನ್ನು ಮುತ್ಸದ್ದಿ ನಾಯಕ ಎಂದು ಭಾವಿಸಿದ್ದೆ, ಅವರು ಅವನ್ಯಾರು, ಇವನ್ಯಾರು ಅನ್ನೋ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೇದು. ರಾಜಕೀಯದಲ್ಲಿ ತಾಳ್ಮೆ ಮುಖ್ಯ ಎಂದ ಸೋಮಣ್ಣ, ನಾನು ವರುಣಾದಲ್ಲಿ ಸ್ಪರ್ಧೆ ಮಾಡ್ತಿರೋದು ವಿಧಿ ನಿಯಮ ಎಂದು ಹೇಳಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…