ಸಿದ್ದರಾಮಯ್ಯ ಸಿಎಂ ಆಗ್ತಾರೆ ಅಂದ್ರೆ ಸಪೋರ್ಟ್ ಮಾಡ್ತೀನಿ: ಜನಾರ್ದನ ರೆಡ್ಡಿ

May 6, 2023
9:23 PM

ಕೆ.ಆರ್.ಪಿ (KRP) ಪಕ್ಷದ ಪ್ರಣಾಳಿಕೆಯ ಭರವಸೆಗಳನ್ನ ಒಪ್ಪಿದರೆ ಹಾಗೂ ನನ್ನ ಜೊತೆ ಭರವಸೆ ಪೂರೈಸುತ್ತೇನೆ ಅಂತ ಸಿದ್ದರಾಮಯ್ಯ ಹೇಳಿದರೆ, ಅವರು ಮುಖ್ಯಮಂತ್ರಿಯಾಗ್ತಾರೆ ಅಂದ್ರೆ ಅವರಿಗೆ ನಾನು ಸಪೋರ್ಟ್ ಮಾಡ್ತೀನಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಕಡೆ ಮಾಜಿ ಸಚಿವ ಜನಾರ್ದನ ರೆಡ್ಡಿ  ವಾಲಿದ್ದಾರೆ.

ರಾಯಚೂರಿನ ಲಿಂಗಸುಗೂರಿನಲ್ಲಿ ಕೆಆರ್ ಪಿ ಪಕ್ಷದ ಅಭ್ಯರ್ಥಿ ಆರ್.ರುದ್ರಯ್ಯ ಪರ ಪ್ರಚಾರ ವೇಳೆ ಭಾಷಣ ಮಾಡಿದ ಅವರು. ಇಂದು ನನಗೆ ಯಾರೂ ಶತ್ರುಗಳಿಲ್ಲ, ಮಿತ್ರರಿಲ್ಲ ಎಂದರು. ಇದೇ ವೇಳೆ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ನಾಯಕರಿಂದಲೇ ದೇಶದ ರಕ್ಷಣೆಯಾಗುತ್ತೆ ಅನ್ನೋ ರೀತಿ ಮಾತನಾಡುತ್ತಾರೆ. ಬಿಜೆಪಿ ದೊಡ್ಡದೊಡ್ಡ ನಾಯಕರು ದೆಹಲಿಯಿಂದ ಬಂದು ಮಾತನಾಡುತ್ತಿದ್ದಾರೆ. ರಾಜ್ಯಕ್ಕೆ ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಹೇಳುತ್ತಿದ್ದಾರೆ.

ಯಾವುದೇ ಅಭಿವೃದ್ಧಿಯನ್ನ ಮಾಡಿಲ್ಲ ಬರೀ ಸುಳ್ಳು, ಮೋಸ, ಬರೀ ಕುತಂತ್ರಿಗಳು. ಕುತಂತ್ರಿಗಳಿಂದಲೇ ಬಿಜೆಪಿ ರಾಜಕೀಯ ಬಂದಿದೆ. ಇಡೀ ರಾಜ್ಯವನ್ನ ಬಿಜೆಪಿ ಸರ್ವ ನಾಶ ಮಾಡಿಬಿಟ್ಟಿದೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಒಂದೂ ಒಳ್ಳೆಯ ಕೆಲಸ ಮಾಡಿಲ್ಲ. ಬಿಜೆಪಿ ಇನ್ನೂ ಮೂರು ದಿನದಲ್ಲಿ ಖಾಲಿಯಾಗುತ್ತೆ. ದೊಡ್ಡ ದೊಡ್ಡ ಕನಸುಗಳನ್ನ ತೋರಿಸಿ ಅಭಿವೃದ್ಧಿ ಮಾಡುತ್ತೇವೆ ಅಂತ ಹೇಳಿ. ಹಿಂದುತ್ವದ ಆಧಾರದ ಮೇಲೆ ಮತಗಳನ್ನ ಕೇಳಿ. ಸಮಾಜವನ್ನ ಒಡೆದು ಆಳಲು ಬಿಜೆಪಿ ದೇಶದಲ್ಲಿದೆ. ಹಿಂದೂ ಮುಸ್ಲಿಂ ಭಾಯಿ ಭಾಯಿ ಭಾರತಮಾತೆ ನಮ್ಮ ತಾಯಿ ಅನ್ನೋ ಸಂದೇಶದಲ್ಲಿ ಕೆಆರ್‍ಪಿ ಪಕ್ಷ ಕಟ್ಟಿದ್ದೇನೆ ಎಂದು ವಿವರಿಸಿದರು.

ಇವತ್ತಿನ ಬಿಜೆಪಿಗೆ ತತ್ವ ಸಿದ್ಧಾಂತ ಯಾವುದು ಇಲ್ಲಾ, ಎಲ್ಲಾ ಮಣ್ಣು ಪಾಲಾಗಿದೆ. ಬಿಜೆಪಿಯಲ್ಲಿ ಇವತ್ತು ಎಲ್ಲವೂ ವ್ಯಾಪಾರ ಆಗಿಬಿಟ್ಟಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದು ಯಡಿಯೂರಪ್ಪರನ್ನ ಸಿಎಂ ಮಾಡಲು ಶ್ರಮಿಸಿದ್ದೇವೆ. ವಾಜಪೇಯಿ, ಅಡ್ವಾಣಿ, ಸುಷ್ಮಾಸ್ವರಾಜ್ ನಮ್ಮನ್ನ ಮಕ್ಕಳ ರೀತಿ ನೋಡುತ್ತಿದ್ದರು ಎಂದು ತಿಳಿಸಿದರು.

ಲಿಂಗಸುಗೂರಲ್ಲಿ ರುದ್ರಯ್ಯ ಕಾಂಗ್ರೆಸ್  ಅಭ್ಯರ್ಥಿಯಾಗ್ತಾರೆ, ಅವರಿಗೆ ಟಿಕೆಟ್ ಸಿಗುತ್ತೆ ಅಂತ ಇತ್ತು. ಕಾಂಗ್ರೆಸ್ ನಾಯಕರು ಅವರಿಗೆ, ಬಿಜೆಪಿ ನಾಯಕರು ನನಗೆ ಯಾಕೆ ಮೋಸ ಮಾಡಿದ್ರೊ ಗೊತ್ತಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ 90% ಕಾರ್ಯಕರ್ತರು ಖಾಲಿಯಾಗಿ ರುದ್ರಯ್ಯ ಹಿಂದೆ ಬಂದಿದ್ದಾರೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror