ಸುದ್ದಿಗಳು

ಸಿದ್ದರಾಮಯ್ಯ ಸಿಎಂ ಆಗ್ತಾರೆ ಅಂದ್ರೆ ಸಪೋರ್ಟ್ ಮಾಡ್ತೀನಿ: ಜನಾರ್ದನ ರೆಡ್ಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೆ.ಆರ್.ಪಿ (KRP) ಪಕ್ಷದ ಪ್ರಣಾಳಿಕೆಯ ಭರವಸೆಗಳನ್ನ ಒಪ್ಪಿದರೆ ಹಾಗೂ ನನ್ನ ಜೊತೆ ಭರವಸೆ ಪೂರೈಸುತ್ತೇನೆ ಅಂತ ಸಿದ್ದರಾಮಯ್ಯ ಹೇಳಿದರೆ, ಅವರು ಮುಖ್ಯಮಂತ್ರಿಯಾಗ್ತಾರೆ ಅಂದ್ರೆ ಅವರಿಗೆ ನಾನು ಸಪೋರ್ಟ್ ಮಾಡ್ತೀನಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಕಡೆ ಮಾಜಿ ಸಚಿವ ಜನಾರ್ದನ ರೆಡ್ಡಿ  ವಾಲಿದ್ದಾರೆ.

Advertisement
Advertisement

ರಾಯಚೂರಿನ ಲಿಂಗಸುಗೂರಿನಲ್ಲಿ ಕೆಆರ್ ಪಿ ಪಕ್ಷದ ಅಭ್ಯರ್ಥಿ ಆರ್.ರುದ್ರಯ್ಯ ಪರ ಪ್ರಚಾರ ವೇಳೆ ಭಾಷಣ ಮಾಡಿದ ಅವರು. ಇಂದು ನನಗೆ ಯಾರೂ ಶತ್ರುಗಳಿಲ್ಲ, ಮಿತ್ರರಿಲ್ಲ ಎಂದರು. ಇದೇ ವೇಳೆ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ನಾಯಕರಿಂದಲೇ ದೇಶದ ರಕ್ಷಣೆಯಾಗುತ್ತೆ ಅನ್ನೋ ರೀತಿ ಮಾತನಾಡುತ್ತಾರೆ. ಬಿಜೆಪಿ ದೊಡ್ಡದೊಡ್ಡ ನಾಯಕರು ದೆಹಲಿಯಿಂದ ಬಂದು ಮಾತನಾಡುತ್ತಿದ್ದಾರೆ. ರಾಜ್ಯಕ್ಕೆ ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಹೇಳುತ್ತಿದ್ದಾರೆ.

ಯಾವುದೇ ಅಭಿವೃದ್ಧಿಯನ್ನ ಮಾಡಿಲ್ಲ ಬರೀ ಸುಳ್ಳು, ಮೋಸ, ಬರೀ ಕುತಂತ್ರಿಗಳು. ಕುತಂತ್ರಿಗಳಿಂದಲೇ ಬಿಜೆಪಿ ರಾಜಕೀಯ ಬಂದಿದೆ. ಇಡೀ ರಾಜ್ಯವನ್ನ ಬಿಜೆಪಿ ಸರ್ವ ನಾಶ ಮಾಡಿಬಿಟ್ಟಿದೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಒಂದೂ ಒಳ್ಳೆಯ ಕೆಲಸ ಮಾಡಿಲ್ಲ. ಬಿಜೆಪಿ ಇನ್ನೂ ಮೂರು ದಿನದಲ್ಲಿ ಖಾಲಿಯಾಗುತ್ತೆ. ದೊಡ್ಡ ದೊಡ್ಡ ಕನಸುಗಳನ್ನ ತೋರಿಸಿ ಅಭಿವೃದ್ಧಿ ಮಾಡುತ್ತೇವೆ ಅಂತ ಹೇಳಿ. ಹಿಂದುತ್ವದ ಆಧಾರದ ಮೇಲೆ ಮತಗಳನ್ನ ಕೇಳಿ. ಸಮಾಜವನ್ನ ಒಡೆದು ಆಳಲು ಬಿಜೆಪಿ ದೇಶದಲ್ಲಿದೆ. ಹಿಂದೂ ಮುಸ್ಲಿಂ ಭಾಯಿ ಭಾಯಿ ಭಾರತಮಾತೆ ನಮ್ಮ ತಾಯಿ ಅನ್ನೋ ಸಂದೇಶದಲ್ಲಿ ಕೆಆರ್‍ಪಿ ಪಕ್ಷ ಕಟ್ಟಿದ್ದೇನೆ ಎಂದು ವಿವರಿಸಿದರು.

ಇವತ್ತಿನ ಬಿಜೆಪಿಗೆ ತತ್ವ ಸಿದ್ಧಾಂತ ಯಾವುದು ಇಲ್ಲಾ, ಎಲ್ಲಾ ಮಣ್ಣು ಪಾಲಾಗಿದೆ. ಬಿಜೆಪಿಯಲ್ಲಿ ಇವತ್ತು ಎಲ್ಲವೂ ವ್ಯಾಪಾರ ಆಗಿಬಿಟ್ಟಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದು ಯಡಿಯೂರಪ್ಪರನ್ನ ಸಿಎಂ ಮಾಡಲು ಶ್ರಮಿಸಿದ್ದೇವೆ. ವಾಜಪೇಯಿ, ಅಡ್ವಾಣಿ, ಸುಷ್ಮಾಸ್ವರಾಜ್ ನಮ್ಮನ್ನ ಮಕ್ಕಳ ರೀತಿ ನೋಡುತ್ತಿದ್ದರು ಎಂದು ತಿಳಿಸಿದರು.

ಲಿಂಗಸುಗೂರಲ್ಲಿ ರುದ್ರಯ್ಯ ಕಾಂಗ್ರೆಸ್  ಅಭ್ಯರ್ಥಿಯಾಗ್ತಾರೆ, ಅವರಿಗೆ ಟಿಕೆಟ್ ಸಿಗುತ್ತೆ ಅಂತ ಇತ್ತು. ಕಾಂಗ್ರೆಸ್ ನಾಯಕರು ಅವರಿಗೆ, ಬಿಜೆಪಿ ನಾಯಕರು ನನಗೆ ಯಾಕೆ ಮೋಸ ಮಾಡಿದ್ರೊ ಗೊತ್ತಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ 90% ಕಾರ್ಯಕರ್ತರು ಖಾಲಿಯಾಗಿ ರುದ್ರಯ್ಯ ಹಿಂದೆ ಬಂದಿದ್ದಾರೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

7 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

11 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

13 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

13 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

14 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

15 hours ago