Advertisement
ಸುದ್ದಿಗಳು

ಬಿಜೆಪಿ ಟಿಕೆಟ್ | ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ | ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ |

Share

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೈಕಮಾಂಡ್ ಕೊಕ್​ ನೀಡಿದ್ದು, ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೂ ಕೂಡ ಟಿಕೆಟ್​ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಶೆಟ್ಟರ್​ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದರು.

ಈ ಬೆಳವಣಿಗೆ ನಡುವಲ್ಲೇ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರನ್ನು ನವದೆಹಲಿಗೆ ಬರುವಂತೆ ದಿಢೀರ್ ಆಹ್ವಾನ ನೀಡಿದೆ. ಅದರಂತೆ ಜಗದೀಶ್ ಶೆಟ್ಟರ್​ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಟಿಕೆಟ್​ ಸಿಗುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರು ಏರ್​ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರುವ ವಿಶ್ವಾಸವಿದೆ ಎಂದು ಹೇಳಿದರು.

ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಪಕ್ಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನು ನಮ್ಮ ಸಚಿವರ ಮೂಲಕ ಮಾಡಿಸಿದ್ದೇನೆ. ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರು ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನುವುದಿಲ್ಲವೇ ಎಂದು ಪ್ರಶ್ನಿಸಿದರು. ಇದೇ ವೇಳೆ ರಾಷ್ಟ್ರೀಯ ನಾಯಕರ ಭಾವನೆ‌ ಮೇಲೆ ನನ್ನ ನಿರ್ಧಾರವಿರುತ್ತದೆ ಎಂದು ಸ್ಪಷ್ಟಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 hour ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

19 hours ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

23 hours ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago