Advertisement
ಸುದ್ದಿಗಳು

ಬಿಜೆಪಿ ಟಿಕೆಟ್ | ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ | ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ |

Share

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೈಕಮಾಂಡ್ ಕೊಕ್​ ನೀಡಿದ್ದು, ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೂ ಕೂಡ ಟಿಕೆಟ್​ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಶೆಟ್ಟರ್​ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದರು.

ಈ ಬೆಳವಣಿಗೆ ನಡುವಲ್ಲೇ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರನ್ನು ನವದೆಹಲಿಗೆ ಬರುವಂತೆ ದಿಢೀರ್ ಆಹ್ವಾನ ನೀಡಿದೆ. ಅದರಂತೆ ಜಗದೀಶ್ ಶೆಟ್ಟರ್​ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಟಿಕೆಟ್​ ಸಿಗುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರು ಏರ್​ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರುವ ವಿಶ್ವಾಸವಿದೆ ಎಂದು ಹೇಳಿದರು.

ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಪಕ್ಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನು ನಮ್ಮ ಸಚಿವರ ಮೂಲಕ ಮಾಡಿಸಿದ್ದೇನೆ. ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರು ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನುವುದಿಲ್ಲವೇ ಎಂದು ಪ್ರಶ್ನಿಸಿದರು. ಇದೇ ವೇಳೆ ರಾಷ್ಟ್ರೀಯ ನಾಯಕರ ಭಾವನೆ‌ ಮೇಲೆ ನನ್ನ ನಿರ್ಧಾರವಿರುತ್ತದೆ ಎಂದು ಸ್ಪಷ್ಟಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago